ಭಟ್ಕಳ: ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಮುರುಡೇಶ್ವರ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಈ ಅಭಿಯಾನದಲ್ಲಿ ಬ್ರಹ್ಮಾವರದ ಸೆಂಟ್ ಮೇರಿ ಸಿರಿಯನ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಕೋಂಕಣ್ ರೈಲ್ವೆ ನಿಗಮದ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದರು. ಒಟ್ಟು 72 ವಿದ್ಯಾರ್ಥಿಗಳು, 3 ಬೋಧಕ ವರ್ಗದ ಸದಸ್ಯರು ಮತ್ತು 20 ರೈಲ್ವೆ ಸಿಬ್ಬಂದಿ ಪಾಲ್ಗೊಂಡು ನಿಲ್ದಾಣದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಸುಮಾರು 300 ಕೆ.ಜಿ. ಕಸವನ್ನು ಸಂಗ್ರಹಿಸಿದರು.
ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಹಾಗೂ ನಿಲ್ದಾಣವನ್ನು ಹಸಿರು ಸ್ವಚ್ಛವಾಗಿಡಲು ಕೋಂಕಣ್ ರೈಲ್ವೆ ಕೈಗೊಂಡಿರುವ ಈ ಕ್ರಮ ಶ್ಲಾಘನೀಯವಾಗಿದೆ.

More Stories
ಮುರುಡೇಶ್ವರ ಪಾಲಿಟೆಕ್ನಿಕ್ ನಲ್ಲಿ ಒಂದು ದಿನದ ಇನ್ಕುಬೇಷನ್ ಜಾಗೃತಿ ಕಾರ್ಯಕ್ರಮ
ಮುರ್ಡೇಶ್ವರದಲ್ಲಿ ಲಾಡ್ಜ್ ಮೇಲೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರ ರಕ್ಷಣೆ, ರೂಮ್ ಬಾಯ್ ಬಂಧನ
ಮುರುಡೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ ಸಾವಿರಾರು ಭಕ್ತರ ದಂಡು – ಕಳೆದುಕೊಂಡವರನ್ನು ಪತ್ತೆ ಹಚ್ಚಿದ ಪೊಲೀಸರು