ಭಟ್ಕಳ: ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಮುರುಡೇಶ್ವರ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಈ ಅಭಿಯಾನದಲ್ಲಿ ಬ್ರಹ್ಮಾವರದ ಸೆಂಟ್ ಮೇರಿ ಸಿರಿಯನ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಕೋಂಕಣ್ ರೈಲ್ವೆ ನಿಗಮದ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದರು. ಒಟ್ಟು 72 ವಿದ್ಯಾರ್ಥಿಗಳು, 3 ಬೋಧಕ ವರ್ಗದ ಸದಸ್ಯರು ಮತ್ತು 20 ರೈಲ್ವೆ ಸಿಬ್ಬಂದಿ ಪಾಲ್ಗೊಂಡು ನಿಲ್ದಾಣದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಸುಮಾರು 300 ಕೆ.ಜಿ. ಕಸವನ್ನು ಸಂಗ್ರಹಿಸಿದರು.
ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಹಾಗೂ ನಿಲ್ದಾಣವನ್ನು ಹಸಿರು ಸ್ವಚ್ಛವಾಗಿಡಲು ಕೋಂಕಣ್ ರೈಲ್ವೆ ಕೈಗೊಂಡಿರುವ ಈ ಕ್ರಮ ಶ್ಲಾಘನೀಯವಾಗಿದೆ.


More Stories
ಕಾರ್ಯಾಚರಣೆ ಸೂಪರ್ ಫಾಸ್ಟ್: 24 ಗಂಟೆಯಲ್ಲೇ ಸುಲಿಗೆ ಪ್ರಕರಣ ಭೇದಿಸಿದ ಮುರ್ಡೇಶ್ವರ ಪೊಲೀಸರು; ಓರ್ವನ ಬಂಧನ!
ಬೀನಾ ವೈದ್ಯ ಪಿಯು ಹಾಗೂ ಪದವಿ ಕಾಲೇಜಿನಲ್ಲಿ ಎನ್ಸಿಸಿ ರ್ಯಾಂಕಿಂಗ್ ಹಾಗೂ ಬ್ಯಾಡ್ಜ್ ಪ್ರದಾನ ಸಮಾರಂಭ
ಹೆದ್ದಾರಿಯಲ್ಲಿ ಅತಿವೇಗಕ್ಕೆ ಬ್ರೇಕ್: ಸ್ಪೀಡ್ ರಾಡಾರ್ ಕಾರ್ಯಾಚರಣೆಯಲ್ಲಿ 8 ವಾಹನಗಳ ವಿರುದ್ಧ ಪ್ರಕರಣ