November 18, 2025

ಅರಣ್ಯ ಹಕ್ಕುಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮತ್ತು ಅರ್ಹರು ಭೂಮಿ ಹಕ್ಕಿನಿಂದ ವಂಚಿತರಾಗದ0ತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗುವದು – ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊನ್ನಾವರ : ಅರಣ್ಯ ಭೂಮಿಯಲ್ಲಿ 2005 ರ ಪೂರ್ವ ಬದುಕನ್ನು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ಅರಣ್ಯ ಹಕ್ಕುಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮತ್ತು ಅರ್ಹರು ಭೂಮಿ ಹಕ್ಕಿನಿಂದ ವಂಚಿತರಾಗದAತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗುವದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾAತ ಕೊಚರೇಕರ ತಿಳಿಸಿದ್ದಾರೆ.

ಚಂದ್ರಕಾAತ ಕೊಚರೇಕರ, ಜಿ.ಎಂ.ಶೆಟ್ಟಿ, ಪಿ.ಟಿ.ನಾಯ್ಕ, ಗಣೇಶ ನಾಯ್ಕ ನೇತೃತ್ವದ ಹೋರಾಟ ಸಮಿತಿಯ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ಬೆಂಗಳೂರಿನಲ್ಲಿ ಭೇಟಿಮಾಡಿ ಅರಣ್ಯಹಕ್ಕು ಅರ್ಜಿಗಳನ್ನು ಸಾರಾ ಸಗಟು ತಿರಸ್ಕರಿಸಿದ ಪರಿಣಾಮದಿಂದ ಪ್ರಸ್ತುತ ಎದುರಾಗಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಅರಣ್ಯ ಭೂಮಿಯಲ್ಲಿನ ಬಗರ ಹುಕುಂ ಸಾಗುವಳಿಗೆ ಸಂಬAಧಿಸಿ 1980ರ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಮರುಸಮೀಕ್ಷೆ ನಡೆಸುವದು ಸೇರಿದಂತೆ, ಅರಣ್ಯ ಹಕ್ಕುಕಾಯ್ದೆಯ ಪರಿಣಾಮಕಾರಿ ಅನುಷ್ಠಾನದಿಂದ ಜಿಲ್ಲೆಯ ಜನರಿಗೆ ಭೂಮಿಯ ಹಕ್ಕು ಕೊಡಿಸಬೇಕೆಂದು ನಿಯೋಗ ಮುಖ್ಯಮಂತ್ರಿಗಳನ್ನು ಒತ್ತಾಯ ಪಡಿಸಿದೆ. .

ರಾಜ್ಯದಲ್ಲಿ ಅರಣ್ಯ ಹಕ್ಕುಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸರಕಾರದ ಮುಂದೆ ವಿವಿದ ರಚನಾತ್ಮಕ ಸಲಹೆಗಳನ್ನು ನಮ್ಮ ಹೋರಾಟ ಸಮಿತಿ ಸರ್ಕಾರದ ಮುಂದೆ ಮಂಡಿಸಿದ್ದು ಸರಕಾರ ಅರಣ್ಯ ಭೂಮಿಸಾಗುವಳಿದಾರರ ಹಿತರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದ್ದು ವಸತಿ ಮತ್ತು ಜೀವನೋಪಾಯಕ್ಕೆ ಅರಣ್ಯ ಭೂಮಿಯನ್ನು ಅವಲಂಬಿಸಿರುವ ಬಡ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಗಳು ತಮ್ಮ ನಿಯೋಗಕ್ಕೆ ಸ್ಪಷ್ಟ ಪಡಿಸಿದ್ದಾರೆ ಎಂದು ಅವರು ತಿಳಿಸಿದರು.

ಅರಣ್ಯ ಭೂಮಿಯಲ್ಲಿನ ಒತ್ತುವರಿಯ ನೈಜ ಸ್ಥಿತಿಯ ಕುರಿತು ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸ್ಥಳ ತನಿಖೆ ನಡೆಸಿ ಉಪವಿಭಾಗೀಯ ಸಮಿತಿಗೆ ವರದಿ ಸಲ್ಲಿಸಲು ಮತ್ತು ಸ್ಥಳ ಮಹಜರು ದ್ರಡೀಕರಣ ಪತ್ರದ ದಾಖಲೆ ಪೂರೈಸುವ ಮೂಲಕ ಅರಣ್ಯವಾಸಿಗಳು ಅರಣ್ಯ ಹಕ್ಕಿನಿಂದ ವಂಚಿತರಾಗದAತೆ ಕ್ರಮ ವಹಿಸಲು ಮುಖ್ಯಮಂತ್ರಿಗಳು ರಾಜ್ಯದ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದ್ದು ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳವೈದ್ಯ ಉಪಸ್ತಿತರಿದ್ದು ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನ ಸೆಳೆಯುವಲ್ಲಿ ಸಹಕರಿಸಿದರು ಎಂದು ಚಂದ್ರಕಾAತ ಕೊಚರೇಕರ ತಿಳಿಸಿದ್ದಾರೆ.
ಇಂದು ನಮ್ಮ ನಿಯೋಗ ರಾಜ್ಯದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ಧೆಶಕ ಟಿ.ಯೋಗೇಶ ಅವರನ್ನು ಸಹ ಭೇಟಿಮಾಡಿ, ಸುಪ್ರೀಂ ಕೋರ್ಟಿಗೆ ಅರಣ್ಯವಾಸಿಗಳ ಪರ ಸರ್ಕಾರದಿಂದ ಅಗತ್ಯ ದ್ರಡೀಕರಣ ಸಲ್ಲಿಸುವ ಕುರಿತು ಕೋರಲಾಗಿದೆ. ನಿರ್ದೇಶಕರ ಸ್ಪಂದನೆ ಉತ್ತಮವಾಗಿತ್ತು.ಅವರ ಪ್ರಕಾರ ನಾವು ಮಂಡಿಸಿದ ಬೇಡಿಕೆಯನ್ನು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಪರಿಗಣಿಸಿ, ಉನ್ನತಾಧಿಕಾರ ಸಮಿತಿಯ ಸಭೆಕರೆದು ಸೂಕ್ತ ನಿರ್ಣಯ ತೆಗೆದುಕೊಂಡಿರುವ ವಿಚಾರವನ್ನು ನಮಗೆ ತಿಳಿಸಿದ್ದಾರೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳವೈದ್ಯ, ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾAತ ಕೊಚರೇಕರ ನಿಯೋಗದ ನೇತೃತ್ವ ವಹಿಸಿದ್ದರು,ಈಸಂದರ್ಭದಲ್ಲಿ ನಿಯೋಗದಲ್ಲಿ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾAತ ಕೊಚರೇಕರ ,ಪ್ರದಾನ ಸಂಚಾಲಕ ಜಿ.ಎಂ.ಶೆಟ್ಟಿ ಅಚಿವೆ,ಸಂಚಾಲಕ ಪಿ.ಟಿ.ನಾಯ್ಕ, ಗಣೇಶ ನಾಯ್ಕ ಕೆಂಬಾಲ ಇತರರು ಇದ್ದರು.

About The Author

error: Content is protected !!