ಭಟ್ಕಳ: ಅಕ್ಟೋಬರ್ 12ರಂದು ತಾಲ್ಲೂಕಿನಲ್ಲಿ ನಡೆಯಲಿರುವ ಬೃಹತ್ ಪಥ ಸಂಚಲನದ ಹಿನ್ನೆಲೆಯಲ್ಲಿ ಭಟ್ಕಳ ನಗರದಲ್ಲಿ ಪೊಲೀಸರು ಭದ್ರತಾ ಕ್ರಮವಾಗಿ ರೂಟ್ ಮಾರ್ಚ್ ನಡೆಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್ ಅವರ ಮಾರ್ಗದರ್ಶನದಲ್ಲಿ ಹಳೆಯ ಬಸ್ ನಿಲ್ದಾಣ, ಮಾರಿಕಟ್ಟೆ, ಹನುಮಾನ್ ದೇವಸ್ಥಾನ, ಹೋ ಮಾರ್ಕೆಟ್ ಮುಂತಾದ ಪ್ರಮುಖ ಬೀದಿ ಮತ್ತು ರಸ್ತೆಗಳು, ಗಲ್ಲಿಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರೂಟ್ ಮಾರ್ಚ್ ಜರುಗಿತು.
ಈ ವೇಳೆ ಡಿವೈಎಸ್ಪಿ ಮಹೇಶ್ ಕೆ.ಎಂ, ಡಿಆರ್ ಡಿವೈಎಸ್ಪಿ ರಾಘವೇಂದ್ರ ನಾಯ್ಕ, ನಗರ ಮತ್ತು ಗ್ರಾಮಿಣ ಠಾಣೆಗಳ ಸಿಪಿಐಗಳು ದಿವಾಕರ ಪಿ.ಎಂ., ಮಂಜುನಾಥ ಲಿಂಗಾರೆಡ್ಡಿ, ಪಿಎಸೈ ನವೀನ್ ನಾಯ್ಕ, ತಿಮ್ಮಪ್ಪ ಮೊಗೇರ್ ರನ್ ಗೌಡ್ ಮತ್ತು ಅನೇಕ ಪೊಲೀಸ್ ಅಧಿಕಾರಿಗಳು ಹಾಜರಾಗಿದ್ದರು.


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ