ಭಟ್ಕಳ: ಅಕ್ಟೋಬರ್ 12ರಂದು ತಾಲ್ಲೂಕಿನಲ್ಲಿ ನಡೆಯಲಿರುವ ಬೃಹತ್ ಪಥ ಸಂಚಲನದ ಹಿನ್ನೆಲೆಯಲ್ಲಿ ಭಟ್ಕಳ ನಗರದಲ್ಲಿ ಪೊಲೀಸರು ಭದ್ರತಾ ಕ್ರಮವಾಗಿ ರೂಟ್ ಮಾರ್ಚ್ ನಡೆಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್ ಅವರ ಮಾರ್ಗದರ್ಶನದಲ್ಲಿ ಹಳೆಯ ಬಸ್ ನಿಲ್ದಾಣ, ಮಾರಿಕಟ್ಟೆ, ಹನುಮಾನ್ ದೇವಸ್ಥಾನ, ಹೋ ಮಾರ್ಕೆಟ್ ಮುಂತಾದ ಪ್ರಮುಖ ಬೀದಿ ಮತ್ತು ರಸ್ತೆಗಳು, ಗಲ್ಲಿಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರೂಟ್ ಮಾರ್ಚ್ ಜರುಗಿತು.
ಈ ವೇಳೆ ಡಿವೈಎಸ್ಪಿ ಮಹೇಶ್ ಕೆ.ಎಂ, ಡಿಆರ್ ಡಿವೈಎಸ್ಪಿ ರಾಘವೇಂದ್ರ ನಾಯ್ಕ, ನಗರ ಮತ್ತು ಗ್ರಾಮಿಣ ಠಾಣೆಗಳ ಸಿಪಿಐಗಳು ದಿವಾಕರ ಪಿ.ಎಂ., ಮಂಜುನಾಥ ಲಿಂಗಾರೆಡ್ಡಿ, ಪಿಎಸೈ ನವೀನ್ ನಾಯ್ಕ, ತಿಮ್ಮಪ್ಪ ಮೊಗೇರ್ ರನ್ ಗೌಡ್ ಮತ್ತು ಅನೇಕ ಪೊಲೀಸ್ ಅಧಿಕಾರಿಗಳು ಹಾಜರಾಗಿದ್ದರು.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ