ಭಟ್ಕಳ: ಪಟ್ಟಣ ಗ್ರಾಮೀಣ ಪ್ರದೇಶದಲ್ಲಿ ಕಳ್ಳತನ, ಹಲ್ಲೆಯಂತಹ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆಯ ಮುಂದಾಳುತ್ವದಲ್ಲಿ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಹೆಬಳೆ ಗಾಂಧಿನಗರದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಈ ವೇಳೆ ಮಾತನಾಡಿದ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಅವರು, ಇತ್ತೀಚಿನ ದಿನಗಳಲ್ಲಿ ಮನೆ, ದೇವಸ್ಥಾನ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಆರೋಪಿಗಳನ್ನು ಪತ್ತೆಹಚ್ಚುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಆಯ್ದ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವ ಕಾರ್ಯ ಕೈಗೊಳ್ಳಲಾಗಿದೆ. ಜೊತೆಗೆ ಮನೆಮನೆ ಭೇಟಿ ಕಾರ್ಯಕ್ರಮವನ್ನೂ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಸಹಕರಿಸಿದರೆ ಅಪರಾಧ ನಿಯಂತ್ರಣ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.

More Stories
ಭಟ್ಕಳ ತಲಾಂದ ಶಾಲೆಯಲ್ಲಿ ಉತ್ಸಾಹಭರಿತ ಪ್ರತಿಭಾ ಕಾರಂಜಿ, ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಸಡಗರ
ಭಟ್ಕಳದಲ್ಲಿ ಶ್ರೀರಾಮ ದಿಗ್ವಿಜಯ ರಥಯಾತ್ರೆಗೆ ಅದ್ದೂರಿ ಸ್ವಾಗತ
ವ್ಯವಹಾರಿಕ ಜ್ಞಾನಕ್ಕೆ ಪಾಠ ಕಲಿಸಿದ ಮಕ್ಕಳ ಸಂತೆ