
ಭಟ್ಕಳ: ಪಟ್ಟಣದ ನಾಗಪ್ಪ ನಾಯ್ಕ ರೋಡ್ 1ನೇ ಕ್ರಾಸ್ನಲ್ಲಿ ನಿಲ್ಲಿಸಿದ್ದ ಸ್ಕೂಟರ್ನ್ನು ಕಳವು ಮಾಡಲು ಅಪರಿಚಿತರು ಯತ್ನಿಸಿರುವ ಘಟನೆ ಹೊರಬಿದ್ದಿದೆ. ವಕೀಲ ಮನೋಜ ಎಂ. ನಾಯ್ಕ ಅವರು ಭಟ್ಕಳ ನಗರ ಠಾಣೆಯಲ್ಲಿ ನೀಡಿದ ದೂರು ಪ್ರಕಾರ, ತಮ್ಮ ಮನೆಯ ಎದುರುಗಡೆ ನಿಲ್ಲಿಸಿದ್ದ ಬಜಾಜ್ ಚೇತಕ್ ಸ್ಕೂಟರ್ ಕಳ್ಳತನದ ಗುರಿಯಾದರೂ, ವಾಹನವನ್ನು ಕೊಂಡೊಯ್ಯಲು ಸಾಧ್ಯವಾಗದೇ, ಕಳ್ಳರು ನಂಬರ್ ಪ್ಲೇಟ್ನ್ನು ಮಾತ್ರ ಕಿತ್ತು ತೆಗೆದುಕೊಂಡು ಹೋಗಿದ್ದಾರೆ.

ಘಟನೆಯ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

More Stories
ಭಟ್ಕಳದಲ್ಲಿ ಶಾಲಾ ಮಕ್ಕಳನ್ನ ಸಾಗಿಸುತ್ತಿದ್ದ ವಾಹನ ಪಲ್ಟಿ: 13 ವಿದ್ಯಾರ್ಥಿಗಳಿಗೆ ಸಣ್ಣ ಗಾಯ
ಭಟ್ಕಳದಲ್ಲಿ ಸಂಭ್ರಮದ ಹೋಳಿ ಹಬ್ಬ
ಬ್ಯಾಂಕ್ ದಾಖಲೆ ಪಡೆದು ವಂಚನೆ: ಠಾಣೆಯಲ್ಲಿ ಪ್ರಕರಣ