ಭಟ್ಕಳ: ಸರಕಾರಿ ಪ್ರೌಢಶಾಲೆ ತೆಂಗಿನಗುAಡಿಯ ವಿದ್ಯಾರ್ಥಿಗಳು ಕ್ರೀಡಾ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾರವಾರದಲ್ಲಿ ನಡೆದ ಜಿಲ್ಲಾಮಟ್ಟದ 17 ವಯೋಮಾನದ ಒಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಹರ್ಷಿತ ವಸಂತ ದೇವಾಡಿಗ ಈಕೆ 100 ಮೀಟರ್, 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, 400 ಮೀಟರ್ ಓಟದಲ್ಲಿ ದ್ವಿತಿಯ ಸ್ಥಾನ ಪಡೆದು ಸಾಧನೆ ಮಾಡಿದ್ದಾಳೆ. 100 ಮೀಟರ್ ಹರ್ಡಲ್ಸ್ನಲ್ಲಿ ಹೇಮಲತಾ ಮಾದೇವ ಗಾವಡಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಉತ್ತಮ ಕ್ರೀಡಾ ಸಾಧನೆ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯ ಸಂತೋಷ ಶ್ರೇಷ್ಠಿ, ತರಬೇತಿ ನೀಡಿದ ಶಿಕ್ಷಕ ನಾಗರಾಜ್ ಎನ್.ಎಸ್, ಸಹಕರಿಸಿದ ವಿನಾಯಕ ಪಟಗಾರ, ಗೋವಿಂದ ಪಟಗಾರ ಹಾಗೂ ಎಸ್ಡಿಎಂಸಿ ಅಧ್ಯಕ್ಷ ಮೋಹನ್ ದೇವಾಡಿಗ ಅಭಿನಂದಿಸಿದ್ದಾರೆ.



More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ