
ಭಟ್ಕಳ: ಭಟ್ಕಳದ ತೆಂಗಿನಗುAಡಿ ಬಂದರಿಯಲ್ಲಿ ಕಳೆದ ವಾರ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರಲ್ಲಿ ಮತ್ತೊಬ್ಬನ ಶವ ಗಂಗೊಳ್ಳಿ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಶವ ಪತ್ತೆಯಾದ ವ್ಯಕ್ತಿಯನ್ನು ಗಣೇಶ ಮೊಗೇರ ಎಂದು ಗುರುತಿಸಲಾಗಿದೆ. ಶವ ಕಂಡ ಬಂದರು ಪ್ರದೇಶಕ್ಕೆ ಮಲ್ಪೆ ಈಶ್ವರ್ ತಂಡ ಹಾಗೂ ಕರಾವಳಿ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿ ಶವವನ್ನು ಹೊರತೆಗೆದು ಮುಂಡಳಿ ದಡ ಮಾರ್ಗವಾಗಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.
ತಾಲೂಕು ಆಡಳಿತದ ಮಾಹಿತಿ ಪ್ರಕಾರ ಶವವನ್ನು ಭಟ್ಕಳಕ್ಕೆ ತರಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದ ನಾಪತ್ತೆಯಾದ ಮೀನುಗಾರರ ಶೋಧ ಕಾರ್ಯಾಚರಣೆ ಮುಂದುವರೆದಿದೆ.


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ