
ಭಟ್ಕಳ: ಭಟ್ಕಳದ ತೆಂಗಿನಗುAಡಿ ಬಂದರಿಯಲ್ಲಿ ಕಳೆದ ವಾರ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರಲ್ಲಿ ಮತ್ತೊಬ್ಬನ ಶವ ಗಂಗೊಳ್ಳಿ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಶವ ಪತ್ತೆಯಾದ ವ್ಯಕ್ತಿಯನ್ನು ಗಣೇಶ ಮೊಗೇರ ಎಂದು ಗುರುತಿಸಲಾಗಿದೆ. ಶವ ಕಂಡ ಬಂದರು ಪ್ರದೇಶಕ್ಕೆ ಮಲ್ಪೆ ಈಶ್ವರ್ ತಂಡ ಹಾಗೂ ಕರಾವಳಿ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿ ಶವವನ್ನು ಹೊರತೆಗೆದು ಮುಂಡಳಿ ದಡ ಮಾರ್ಗವಾಗಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.
ತಾಲೂಕು ಆಡಳಿತದ ಮಾಹಿತಿ ಪ್ರಕಾರ ಶವವನ್ನು ಭಟ್ಕಳಕ್ಕೆ ತರಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದ ನಾಪತ್ತೆಯಾದ ಮೀನುಗಾರರ ಶೋಧ ಕಾರ್ಯಾಚರಣೆ ಮುಂದುವರೆದಿದೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ