ಭಟ್ಕಳ: ಮುರುಡೇಶ್ವರ ಸಮುದ್ರ ತೀರದಲ್ಲಿ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ಅಲೆಗಳ ಹೊಡೆತಕ್ಕೆ ತುತ್ತಾಗಿ ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಮೃತನನ್ನು ಶಿವಮೊಗ್ಗ ಜಿಲ್ಲೆಯ ಹೋಟೆಲ್ ಮಾರಿಕಾಂಬ ಹತ್ತಿರ ವಾಸವಾಗಿದ್ದ ಶುಭಾಸ್ ದೇವೇಂದ್ರಪ್ಪ (45) ಎಂದು ಗುರುತಿಸಲಾಗಿದೆ, ಪೊಲೀಸರು ಮಾಹಿತಿಯ ಪ್ರಕಾರ, ಮೃತನು ಗುರುವಾರ ಸಂಜೆ ಸ್ನೇಹಿತನೊಂದಿಗೆ ಶಿವಮೊಗ್ಗದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಆಗಮಿಸಿದ್ದ. ಶುಕ್ರವಾರ ಮಧ್ಯಾಹ್ನ ಸಮುದ್ರ ಸ್ನಾನಕ್ಕೆ ಇಳಿದ ವೇಳೆ ಅಚಾನಕ್ ಬಲವಾದ ಅಲೆಗಳು ಎಳೆದೊಯ್ದಿದ್ದು ನೀರಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ.
ಘಟನೆಯ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

More Stories
ಬ್ಯಾಂಕ್ ಎಟಿಎಂ ಭದ್ರತೆ: ಮುರುಡೇಶ್ವರ ಠಾಣೆಯಲ್ಲಿ ಮುನ್ನೆಚ್ಚರಿಕಾ ಸಭೆ
ತಾಲೂಕಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೀನಾ ವೈದ್ಯ ಕಾಲೇಜು ವಿದ್ಯಾರ್ಥಿಗಳ ಸಾಧನೆ.
ಮಂಗಳಮುಖಿಯರ ನಾಟಕ! ಯುವಕನ ಸರ ಕಿತ್ತು ಪರಾರಿಯಾಗಿದ್ದ ನಾಲ್ವರ ಬಂಧನ