ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ 2024-25 ನೇ ಸಾಲಿನ ಬಿ.ಎಡ್ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪಲಿತಾಂಶವು ಶೇ. 100 ರಷ್ಟಾಗಿದ್ದು ಪರೀಕ್ಷೆಗೆ ಕುಳಿತ ಒಟ್ಟು 47 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು ಅಂಕವನ್ನು ಪಡೆದು ತೇರ್ಗಡೆಯಾಗಿದ್ದು ಉಳಿದ ವಿದ್ಯಾರ್ಥಿಗಳು ಶೇ. 80 ಕ್ಕಿಂತ ಹೆಚ್ಚು ಅಂಕವನ್ನು ಪಡೆದು ತೇರ್ಗಡೆಯಾಗಿದ್ದಾರೆ.




ಮಹಾವಿದ್ಯಾಲಯದ ನೂತನಾ ಮಂಜುಗೌಡ 93.67% ಅಂಕದೊAದಿಗೆ ಪ್ರಥಮ, ಅನಿತಾ ನಿಂಗಪ್ಪ ಹರವಳ್ಳಿ 92.67% ಅಂಕದೊAದಿಗೆ ದ್ವಿತೀಯ ಮತ್ತು ಗೀತಾ ಅಣ್ಣಪ್ಪ ನಾಯ್ಕ 92.17% ಅಂಕದೊAದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಉತ್ತಮ ಸಾಧನೆ ತೋರಿದ ಎಲ್ಲಾ ವಿದ್ಯಾರ್ಥಿಗಳಿಗೆ ಭಟ್ಕಳ ಎಜ್ಯುಕೇಶನ ಟ್ರಸ್ಟಿನ ಅಧ್ಯಕ್ಷರಾದ ಡಾ. ಸುರೇಶ ವಿ. ನಾಯಕ, ಮ್ಯಾನೇಜಿಂಗ್ ಟ್ರಸ್ಟಿಯವರಾದ ಶ್ರೀ ಆರ್. ಈ. ಕೊಲ್ಲೆ, ಟ್ರಸ್ಟಿ ಮ್ಯಾನೇಜರ್À ಶ್ರೀ ರಾಜೇಶ ನಾಯಕ, ಪ್ರಾಂಶುಪಾಲರಾದ ಡಾ. ವಿರೇಂದ್ರ ವಿ. ಶಾನಬಾಗ, ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿರುತ್ತಾರೆ.

More Stories
ಭಟ್ಕಳದ ಶ್ರೀ ಗುರು ವಿದ್ಯಾಧೀರಾಜ ಪಿಯು ಕಾಲೇಜಿನಲ್ಲಿ CA ಫೌಂಡೇಶನ್ ಮತ್ತು CS ಪ್ರವೇಶ ಪರೀಕ್ಷೆ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಹಳದಿಪುರ ಕೃಷ್ಣಾಶ್ರಮ ಮಠದಲ್ಲಿ ವ್ಯಕ್ತಿ ಮೇಲೆ ಹಲ್ಲೆ ಆರೋಪ: ವಿಡಿಯೋ ವೈರಲ್
ಬಡ ಪ್ರತಿಭಾವಂತ ದಿವ್ಯಾಂಗ ವಿದ್ಯಾರ್ಥಿನಿ ಶ್ರೀರಕ್ಷಾಳ ವಿದ್ಯಾಭ್ಯಾಸ ಹಾಗೂ ಬದುಕಿಗೆ ಆಸರೆಯಾಗಿ: ಒಂದು ಮಾನವೀಯ ವಿನಂತಿ