ಕಾರವಾರ : ದಾಂಡೇಲಿಯಲ್ಲಿ ನಡೆಯಲಿರುವ ಬೆಳ್ಳಿ ಹಬ್ಬದ ಸಂಭ್ರಮದ ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾರವರು ಮಂಗಳವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಶುಭ ಹಾರೈಸಿ ಮಾತನಾಡಿದ ಅವರು 25ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ದಾಂಡೇಲಿ ನಡೆಯುತ್ತಿರುವುದು ನಿಜಕ್ಕೂ ಕೂಡ ಸಂತಸದ ಸಂಗತಿ. ಈ ಸಮ್ಮೇಳನವನ್ನ ಯಶಸ್ವಿಗೊಳಿಸುವುದು ಎಲ್ಲರ ಜವಾಬ್ದಾರಿ. ಈ ನುಡಿ ಹಬ್ಬದಲ್ಲಿ ಜಿಲ್ಲೆಯ ಎಲ್ಲ ಜನತೆ ಭಾಗವಹಿಸುವಂತಾಗಬೇಕು. ಆ ಮೂಲಕ ಕನ್ನಡ ಕಟ್ಟುವ ಹಾಗೂ ಸಾಹಿತ್ಯದ ಅಭಿರುಚಿಯನ್ನು ಬೆಳೆಸುವ, ಸಾಂಸ್ಕೃತಿಕ ಮನಸ್ಥಿತಿಯನ್ನು ರೂಪಿಸುವ ಕೆಲಸವಾಗಬೇಕಿದೆ ಎಂದರು. ಈ ಸಂದರ್ಭದಲ್ಲಿ , ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ, ಗೌರವ ಕಾರ್ಯದರ್ಶಿ ಪಿ.ಆರ್. ನಾಯ್ಕ, ಗೌರವ ಕೋಶಾಧ್ಯಕ್ಷ ಮುರ್ತುಜಾ ಹುಸೇನ, ಕಾರವಾರ ಕಸಾಪ ಅಧ್ಯಕ್ಷ ರಾಮಾ ನಾಯ್ಕ, ದಾಂಡೇಲಿ ಕಸಾಪ ಕೋಶಾಧ್ಯಕ್ಷ ಶ್ರೀಮಂತ ಮದರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
About The Author


More Stories
ಕಸ್ತೂರಿ ರಂಗನ್ ವರದಿ ಅಧಿಸೂಚನೆಗೆ ತೀವ್ರ ವಿರೋಧ: ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಆಕ್ರೋಶ.
ಜನಜಾಗೃತಿ ವೇದಿಕೆ ಜಿಲ್ಲಾ ನೂತನ ಸಂಘಟನಾ ಅಧ್ಯಕ್ಷರಾಗಿ ವಾಮನ ಸುಬ್ರಾಯ ನಾಯ್ಕ್ ಸರ್ವಾನುಮತದಿಂದ ಆಯ್ಕೆ.
ಮಂತ್ರಿ ನಾಗೇಂದ್ರ ರಾಜೀನಾಮೆ ನೀಡಲೇಬೇಕು: ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬಿರುಸಿನ ಹೋರಾಟ!