ಗುಂಡ್ಲುಪೇಟೆ; ತಾಲೂಕಿನ ಕೆರೆಗಳಿಗೆ ನೀರು ಬಿಡುವ ವಿಚಾರವಾಗಿ ಡಿಸೆಂಬರ್ ತಿಂಗಳ ಮೊದಲನೇವಾರ ರೈತರುಗಳಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ. ಮತ್ತು ನುಡಿದಂತೆ ನಡೆದಿದ್ದೇನೆ ಎಂದು ಶಾಸಕರಾದ ಎಚ್ ಎಂ ಗಣೇಶ್ ಪ್ರಸಾದ್ ರವರು ಸುದ್ದಿಗಾರರೊಂದಿಗೆ ತಿಳಿಸಿದರು. ವಿರೋಧ ಪಕ್ಷದವರು ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದರಿAದ ನೀರು ಬಿಟ್ಟಿಲ್ಲ ರೈತರುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸವನ್ನು ಮಾಡಿದ್ದೇವೆ ಮತ್ತು ರೈತರುಗಳಿಗೆ ಡಿಸೆಂಬರ್ ಮೊದಲನೇ ವಾರ ಕೆರೆ ತುಂಬುಸುವುದಾಗಿ ಮಾತು ಕೊಟ್ಟಿದ್ದೇವೆ ಅದರಂತೆ ಶುಕ್ರವಾರ ಹುತ್ತೂರು ಪಂಪ್ ಹೌಸ್ ಬಳಿ ಬಟನ್ ಒತ್ತುವುದರ ಮೂಲಕ ಚಾಲನೆ ಮಾಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಎಚ್ ಎಸ್ ನಂಜಪ್ಪ, ಕಬ್ಬಳ್ಳಿ ಮಹೇಶ್, ಪಿಬಿ ರಾಜಶೇಖರ್, ಮಂಚಳ್ಳಿ ಲೋಕೇಶ್, ಎಚ್ ಎನ್ ಬಸವರಾಜು, ಮಡಿವಾಳಪ್ಪ, ಶಶಿಧರ್, ಆರ್ ಎಸ್ ನಾಗರಾಜು, ಕಾವೇರಿ ನೀರಾವರಿ ನಿಗಮದ ಹಾಗೂ ಯುವ ಮುಖಂಡರುಗಳು ಅಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ಯುವ ಮುಖಂಡರುಗಳು ಉಪಸ್ಥಿತರಿದ್ದರು.
ಭಾವನ ಟಿವಿಗಾಗಿ ಸದಾನಂದ ಕಣ್ಣೇಗಾಲ ಗುಂಡ್ಲುಪೇಟೆ
About The Author


More Stories
ಗುಂಡ್ಲುಪೇಟೆ ಪುರಸಭೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ: ಮಾಧ್ಯಮ ಪ್ರತಿನಿಧಿ ಶ್ರೀಮತಿ ತಾರಾ ನಾಗೇಂದ್ರ ಅವರಿಗೆ ಗೌರವ ಸನ್ಮಾನ
ನಮ್ಮ ಪರಂಪರೆ ನಮ್ಮ ಹೆಮ್ಮೆ, ಸಂರಕ್ಷಣೆ ನಮ್ಮ ಜವಾಬ್ದಾರಿ: ತೆರಕಣಾಂಬಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಶ್ರಮದಾನ
ನಿವೃತ್ತ ಯೋಧರಿಗೆ ಅದ್ದೂರಿ ಮೆರವಣಿಗೆ, ಅಭಿನಂದನಾ ಸಮಾರಂಭ