ಹೊನ್ನಾವರ : ಡಿ.21ರಂದು ಮಂಕಿ ಪ.ಪಂ.ಚುನಾವಣೆಯಲ್ಲಿ ಅನಂತವಾಡಿ ವಾರ್ಡಿನ ಮುಳಗೋಡು ಗ್ರಾಮಸ್ಥರು ಚುನಾವಣೆಗೆ ಮತದಾನದ ಬಹಿಷ್ಕಾರ ಮಾಡುವುದಾಗಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ.
ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನಂತವಾಡಿ ವಾರ್ಡಿನ ಮುಳಗೋಡು ಚಿಕ್ಕ ಹಳ್ಳಿಯಾಗಿದ್ದು, ಸಂಪರ್ಕ ಕಲ್ಪಿಸಿ ಕೊಡುವ ರಸ್ತೆಯೇ ಇಲ್ಲವಾಗಿದೆ. ಚಿಕ್ಕದಾದ ಹೊಳೆ ಇದ್ದು ಮಳೆಗಾಲದಲ್ಲಿ ಅಪಾಯಕಾರಿ ಆಗಿದ್ದು ಸೇತುವೆ ತೀರಾ ಅಗತ್ಯ ಇದೆ. ಮೂವತ್ತು ವರ್ಷದಿಂದ ಸೇತುವೆಗಾಗಿ ಹೋರಾಟ ನಡೆಸಿದರು ಜನ ಪ್ರತಿನಿಧಿಗಳು, ಅಧಿಕಾರಿಗಳು ಅಸಡ್ಡೆ ತೋರಿದ್ದಾರೆ.
ರೈತರು ತೆಂಗು, ಅಡಿಕೆ, ಬಾಳೆ ಮತ್ತು ಭತ್ತವನ್ನು ಬೆಳೆಯುತ್ತಾರೆ. ಜೀವನೋಪಾಯಕ್ಕೆ ಕೃಷಿಯನ್ನೆ ಅವಲಂಬಿಸಿದ್ದಾರೆ. ಇಲ್ಲಿ ದ್ವಿಚಕ್ರ ವಾಹನ ಬಿಟ್ಟು ನಾಲ್ಕು ಚಕ್ರದ ವಾಹನದ ಸಂಚಾರಕ್ಕೆ ಅವಕಾಶ ಇಲ್ಲವಾಗಿದೆ. ಬೆಳೆದ ಬೆಲೆ ಮಾರುಕಟ್ಟೆಗೆ ಸಾಗಾಟ ಮಾಡುವುದು ಕಷ್ಟವಾಗಿದೆ. ಇಲ್ಲಿಯ ಜನರಿಗೆ ಸರಿಯಾದ ಮನೆಯು ಇಲ್ಲವಾಗಿದೆ. ವಿದ್ಯಾರ್ಥಿಗಳಿಗೆ ಶಾಲಾ ವಾಹನದ ಕೊರತೆಯೂ ಕಾಡುತ್ತಿದೆ. ಸಂಬAಧ ಪಟ್ಟ ಅಧಿಕಾರಿಗಳು ನಮ್ಮ ಊರಿಗೆ ಭೇಟಿಕೊಟ್ಟು ಈ ಭಾಗದ ಸಮಸ್ಯೆ ಪರಿಶೀಲಿಸಿ ನ್ಯಾಯ ಒದಗಿಸಬೇಕು ಒಂದೊಮ್ಮೆ ಬೇಡಕೆ ಈಡೇರದೆ ಹೊದಲ್ಲಿ ಸಾಮೂಹಿಕವಾಗಿ ಮಂಕಿ ಪ. ಪಂ. ಚುನಾವಣೆಗೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ತಹಸೀಲ್ದಾರ್ ಪ್ರವೀಣ ಕರಾಂಡೆ ಮತದಾನ ಬಹಿಷ್ಕಾರ ಮಾಡದಂತೆ ಗ್ರಾಮಸ್ಥರಿಗೆ ತಿಳುವಳಿಕೆ ಹೇಳಿದರು. ಕಳೆದ ಹಲವು ವರ್ಷದಿಂದ ನಮಗೆ ಆಶ್ವಾಸನೆ ಕೊಡುತ್ತಾ ಬಂದಿದ್ದಾರೆ. ಈ ಬಾರಿಯೂ ಹಾಗೆ ಮಾಡುತ್ತಾರೆ. ನಮ್ಮ ಸಮಸ್ಯೆ ಬಗೆಹರಿಸಿ ಕೊಡುವ ತನಕ ಮತದಾನ ಮಾಡುವುದಿಲ್ಲ ಎಂದು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ನೀಡಿದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಗುಣವಂತೆ ಶ್ರೀ ಶಂಭು ಶಂಭುಲಿಂಗೇಶ್ವರ ದೇವಾಲಯದಲ್ಲಿ ಧಾರ್ಮಿಕ ಸಭೆ ವೈಭವ
ಶ್ರೀ ಶಂಭು ಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಶಿವಾಲಯ ಲೋಕಾರ್ಪಣೆ
ಸಿ.ಎ ಕನಸು ಹೊತ್ತ ಗ್ರಾಮೀಣ ಪ್ರತಿಭೆ ಚಿನ್ನಯಿ ಶೆಟ್ಟಿ, ಪಿಯುಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ