ಭಟ್ಕಳ: ತಾಲ್ಲೂಕಿನ
ಮೂಡಭಟ್ಕಳದಲ್ಲಿರುವ ಮುಕ್ತಿದಾಮ ಹಿಂದು ರುದ್ರಭೂಮಿಯನ್ನು ಮೂಡಭಟ್ಕಳದ ಕ್ರಿಯೇಟಿವ್ ಬಾಯ್ಸ್ ಯುವಕರು ಸ್ವಯಂಪ್ರೇರಿತವಾಗಿ ಶುಚಿಗೊಳಿಸಿದರು.

ರುದ್ರಭೂಮಿಯಲ್ಲಿ ದೀರ್ಘಕಾಲದಿಂದ ಜಮಾಯಿಸಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಕಸಕಡ್ಡಿ ಹಾಗೂ ಒಣಗಿದ ಎಲೆಗಳನ್ನು ತೆರವುಗೊಳಿಸಿ ಸ್ಥಳವನ್ನು ಸ್ವಚ್ಛ ಹಾಗೂ ಸುವ್ಯವಸ್ಥಿತಗೊಳಿಸಲಾಯಿತು. ಸಾರ್ವಜನಿಕ ಉಪಯೋಗದ ಸ್ಥಳಗಳನ್ನು ಸ್ವಚ್ಛವಾಗಿ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂಬ ಸಂದೇಶವನ್ನು ಯುವಕರು ಈ ಕಾರ್ಯದ ಮೂಲಕ ಸಮಾಜಕ್ಕೆ ನೀಡಿದ್ದಾರೆ.
ಯುವಕರ ಈ ಸೇವಾಭಾವದ ಸಮಾಜಮುಖಿ ಕಾರ್ಯಕ್ಕೆ ಸ್ಥಳೀಯ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಇಂತಹ ಸ್ವಯಂಸೇವಾ ಮತ್ತು ಪರಿಸರಪರ ಕಾರ್ಯಗಳು ಮುಂದುವರಿಯಬೇಕೆಂದು ಸಾರ್ವಜನಿಕರು ಆಶಿಸಿದ್ದಾರೆ.


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ