ಭಟ್ಕಳ: ಮೀನುಗಾರಿಕೆಗೆ ತೆರಳುವ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಪರಿಣಾಮ ಮೀನುಗಾರನೊಬ್ಬರು ಮೃತಪಟ್ಟಿರುವ ದುರ್ಘಟನೆ ಭಟ್ಕಳ ತಾಲೂಕಿನ ಮಾವಿನಕುರ್ವಾ ಬಂದರಿನಲ್ಲಿ ನಡೆದಿದೆ.
ಕಾಯ್ಕಿಣಿ ಮೂಡಕೇರಿ ಬಸ್ತಿ ನಿವಾಸಿ ಶಂಕರ ತಂದೆ ಸಣ್ಣತಮ್ಮ ನಾಯ್ಕ (40) ಮೃತರಾಗಿದ್ದಾರೆ. ದೂರು ಪ್ರಕಾರ, ಶಂಕರ ನಾಯ್ಕ ಅವರು ರಾತ್ರಿ ಸಮಯದಲ್ಲಿ ಮೀನುಗಾರಿಕೆಗೆ ಹೊರಡುವ ಉದ್ದೇಶದಿಂದ ಬಂದರಿನಲ್ಲಿ ನಿಲ್ಲಿಸಿದ್ದ ಬೋಟಿಯಲ್ಲಿ ಬಲೆ ತಯಾರಿಯಲ್ಲಿ ತೊಡಗಿಸಿಕೊಂಡಿದ್ದರು. ಈ ಸಂದರ್ಭ ದಕ್ಕೆಯಿಂದ ಬೋಟಿಗೆ ಹತ್ತಲು ಯತ್ನಿಸಿದಾಗ, ದಕ್ಕೆ ಹಾಗೂ ಬೋಟಿಯ ಮಧ್ಯೆ ಆಳವಾದ ನೀರಿನ ಭಾಗದಲ್ಲಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ. ಮೇಲಕ್ಕೆ ಬರಲು ಸಾಧ್ಯವಾಗದೇ ಅವರು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಮೃತನ ಪತ್ನಿ ಗಿರಿಜಾ ಕೋಂ. ಶಂಕರ ನಾಯ್ಕ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಕರಾವಳಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ 112 ಇಆರ್ಎಸ್ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ