36 ಗ್ರಾಂ ಬಂಗಾರದ ಚೈನ್ ನಾಪತ್ತೆ; ರೂ.1.69 ಲಕ್ಷ ಮೌಲ್ಯ
ಭಟ್ಕಳ: ಮುರಡೇಶ್ವರ ದೇವಸ್ಥಾನದಲ್ಲಿ ಭಕ್ತರೊಬ್ಬರ ಕುಟುಂಬದ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಚಾಲಾಡ್ ನಿವಾಸಿ ಜೈಯಂತ ಎ.ವಿ. ವೇಣುಗೋಪಾಲ (42) ಅವರು ದೂರು ಸಲ್ಲಿಸಿದ್ದು, ತಮ್ಮ ಹೆಂಡತಿ, ಮಕ್ಕಳು, ತಂದೆ-ತಾಯಿ ಹಾಗೂ ಸಂಬಂಧಿಕರೊಂದಿಗೆ ದೇವಾಲಯಕ್ಕೆ ದರ್ಶನಕ್ಕೆ ಆಗಮಿಸಿದ್ದರು. ದೇವರ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ನಿಂತಿದ್ದ ವೇಳೆ, ಅಪರಿಚಿತ ಕಳ್ಳರು ಅವರ ತಾಯಿಗೆ ತಿಳಿಯದಂತೆ ಕೈಚಳಕ ತೋರಿಸಿ, ಅವರ ಬಳಿಯಿದ್ದ ವ್ಯಾನಿಟಿ ಬ್ಯಾಗಿನ ಜಿಪ್ ತೆರೆಯಿಸಿ ಅದರೊಳಗಿದ್ದ ತಂದೆಗೆ ಸೇರಿದ ಸುಮಾರು 36 ಗ್ರಾಂ ತೂಕದ ಬಂಗಾರದ ಚೈನ್ ಅನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕಳವಾದ ಚಿನ್ನಾಭರಣದ ಅಂದಾಜು ಮೌಲ್ಯ ರೂ. 1,69,000/- ಎಂದು ತಿಳಿಸಲಾಗಿದೆ. ಕಳವಾದ ಚೈನ್ ಹಾಗೂ ಕಳ್ಳರನ್ನು ಪತ್ತೆಹಚ್ಚುವಂತೆ ದೂರುದಾರರು ಪೊಲೀಸರನ್ನು ವಿನಂತಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

More Stories
ಮುರುಡೇಶ್ವರ ಪಾಲಿಟೆಕ್ನಿಕ್ ನಲ್ಲಿ ಒಂದು ದಿನದ ಇನ್ಕುಬೇಷನ್ ಜಾಗೃತಿ ಕಾರ್ಯಕ್ರಮ
ಮುರ್ಡೇಶ್ವರದಲ್ಲಿ ಲಾಡ್ಜ್ ಮೇಲೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರ ರಕ್ಷಣೆ, ರೂಮ್ ಬಾಯ್ ಬಂಧನ
ಮುರುಡೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ ಸಾವಿರಾರು ಭಕ್ತರ ದಂಡು – ಕಳೆದುಕೊಂಡವರನ್ನು ಪತ್ತೆ ಹಚ್ಚಿದ ಪೊಲೀಸರು