ಭಟ್ಕಳ: ನಗರದ ರಾಷ್ಟ್ರೀಯ ಹೆದ್ದಾರಿ–66ರ ಕ್ವಾಲಿಟಿ ಹೋಟೆಲ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೋಟಾರ್ಸೈಕಲ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ.

ಕುಂದಾಪುರದಿಂದ ಹೊನ್ನಾವರದತ್ತ ಟ್ಯಾಂಕರ್ ಅನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ್ದ ಪರಿಣಾಮ, ರಸ್ತೆ ತಿರುವಿನಲ್ಲಿ ಭಟ್ಕಳ ಸರ್ಕಲ್ನಿಂದ ಸರ್ಪನಕಟ್ಟಾ ಕಡೆಗೆ ಸಾಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಅಪಘಾತದಲ್ಲಿ ಬೈಕ್ ಸವಾರ ಪರಮೇಶ್ವರ ಮಾದೇವ ನಾಯ್ಕ (37), ಬೆಣ್ದೂರ ಯಲ್ಲೋಡಿ ಕೌರ ನಿವಾಸಿ, ಇವರಿಗೆ ಬಲಕಾಲಿನ ಮೊಣಕಾಲಿನ ಕೆಳಭಾಗದಲ್ಲಿ ಮೂಳೆ ಮುರಿತವಾಗಿದ್ದು, ಜೊತೆಗೆ ಬಲಗೈ, ಭುಜ ಹಾಗೂ ಹಣೆಗೆ ರಕ್ತಗಾಯಗಳೊಂದಿಗೆ ಒಳನೋವುಗಳು ಉಂಟಾಗಿವೆ.
ಗಾಯಾಳುವನ್ನು ತಕ್ಷಣ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಉಡುಪಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಪಘಾತಕ್ಕೆ ಕಾರಣನಾದ ಟ್ಯಾಂಕರ್ ಚಾಲಕ ಹುನಗುಂದ ನಿವಾಸಿ ಪ್ರಶಾಂತ ಮಹಾಂತೇಶ ವಾಲಿಕರ (25) ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ