ಭಟ್ಕಳ: ನಗರದ ರಾಷ್ಟ್ರೀಯ ಹೆದ್ದಾರಿ–66ರ ಕ್ವಾಲಿಟಿ ಹೋಟೆಲ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೋಟಾರ್ಸೈಕಲ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಕುಂದಾಪುರದಿಂದ ಹೊನ್ನಾವರದತ್ತ ಟ್ಯಾಂಕರ್ ಅನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ್ದ ಪರಿಣಾಮ, ರಸ್ತೆ ತಿರುವಿನಲ್ಲಿ ಭಟ್ಕಳ ಸರ್ಕಲ್ನಿಂದ ಸರ್ಪನಕಟ್ಟಾ ಕಡೆಗೆ ಸಾಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಅಪಘಾತದಲ್ಲಿ ಬೈಕ್ ಸವಾರ ಪರಮೇಶ್ವರ ಮಾದೇವ ನಾಯ್ಕ (37), ಬೆಣ್ದೂರ ಯಲ್ಲೋಡಿ ಕೌರ ನಿವಾಸಿ, ಇವರಿಗೆ ಬಲಕಾಲಿನ ಮೊಣಕಾಲಿನ ಕೆಳಭಾಗದಲ್ಲಿ ಮೂಳೆ ಮುರಿತವಾಗಿದ್ದು, ಜೊತೆಗೆ ಬಲಗೈ, ಭುಜ ಹಾಗೂ ಹಣೆಗೆ ರಕ್ತಗಾಯಗಳೊಂದಿಗೆ ಒಳನೋವುಗಳು ಉಂಟಾಗಿವೆ.
ಗಾಯಾಳುವನ್ನು ತಕ್ಷಣ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಉಡುಪಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅಪಘಾತಕ್ಕೆ ಕಾರಣನಾದ ಟ್ಯಾಂಕರ್ ಚಾಲಕ ಹುನಗುಂದ ನಿವಾಸಿ ಪ್ರಶಾಂತ ಮಹಾಂತೇಶ ವಾಲಿಕರ (25) ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

More Stories
ಎಐಟಿಎಂನಲ್ಲಿ ವಿಟಿಯು ಅಂತರ ಕಾಲೇಜು ಫುಟ್ಬಾಲ್ ಪಂದ್ಯಾವಳಿ ಚಾಲನೆ
ತೇಜಸ್ವಿ ನಾಯ್ಕರಿಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ
ಬೈಲೂರಿನಲ್ಲಿ ಭಗವದ್ಗೀತೆಯ 3ನೇ ಅಧ್ಯಾಯ ಸಮರ್ಪಣೆ, ಮಾತೃವಂದನೆ ಕಾರ್ಯಕ್ರಮ ಯಶಸ್ವಿ