ಹೊನ್ನಾವರ: ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮವು ಈಗ ವಿವಾದದ ಕೇಂದ್ರಬಿಂದುವಾಗಿದೆ. ಸಮಿತಿಯು ಅರ್ಹ ಸಾಧಕರನ್ನು ಕಡೆಗಣಿಸಿ, ಕೇವಲ ತಮಗೆ ಬೇಕಾದವರಿಗೆ ಮತ್ತು ಆಪ್ತರಿಗೆ ಮಾತ್ರ ಗೌರವ ಸಮರ್ಪಿಸಿದೆ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ವಿನಾಯಕ ಆಚಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊನ್ನಾವರ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿದ ನೂರಾರು ಸಾಧಕರಿದ್ದಾರೆ. ಆದರೆ ಸಮಿತಿಯು ಅಂತಹವರನ್ನು ಗುರುತಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಸನ್ಮಾನಿತರ ಪಟ್ಟಿಯಲ್ಲಿ ಕೇವಲ ಸಮಿತಿಯೊಂದಿಗೆ ಅಥವಾ ಪ್ರಭಾವಿಗಳೊಂದಿಗೆ ‘ಹೊಂದಾಣಿಕೆ’ ಮಾಡಿಕೊಂಡವರಿಗೆ ಮಾತ್ರ ಸ್ಥಾನ ಸಿಕ್ಕಿದೆ. ಇದು ಪ್ರಶಸ್ತಿಯ ಘನತೆಯನ್ನು ಕುಂದಿಸಿದೆ ಎಂದು ವಿನಾಯಕ ಆಚಾರಿ ದೂರಿದ್ದಾರೆ. “ರಾಷ್ಟ್ರೀಯ ಹಬ್ಬಗಳಂತಹ ಪವಿತ್ರ ವೇದಿಕೆಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ ನಿಜವಾದ ಸಾಧಕರಿಗೆ ಗೌರವ ಸಿಗಬೇಕಿತ್ತು.
“ಸನ್ಮಾನ ಎನ್ನುವುದು ಸಾಧನೆಗೆ ನೀಡುವ ಗೌರವವೇ ಹೊರತು, ಸ್ನೇಹ ಅಥವಾ ಪ್ರಭಾವಕ್ಕೆ ನೀಡುವ ಕಾಣಿಕೆಯಲ್ಲ. ಸಮಿತಿಯ ಈ ಧೋರಣೆಯನ್ನು ನಾವು ಖಂಡಿಸುತ್ತೇವೆ.” ಎಂದು ವಿನಾಯಕ ಆಚಾರಿ ದೂರಿದ್ದಾರೆ.

More Stories
ಹೊನ್ನಾವರದಲ್ಲಿ ಜುಲೈ 26ರಂದು ‘ಕಾರ್ಗಿಲ್ ವಿಜಯ ದಿವಸ’: ಬೃಹತ್ ರ್ಯಾಲಿ ಹಾಗೂ ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ
ಕ್ರೀಡಾಕೂಟದಲ್ಲಿ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಅದ್ಭುತ ಸಾಧನೆ:
ಕಿಸಾ (KISA) ಯೋಗ ಸ್ಪರ್ಧೆ: ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಗೆ ಪ್ರಥಮ ಸ್ಥಾನ