ಭಟ್ಕಳ: ತಾಲೂಕಿನ ಗುಳ್ಳೆ ಪ್ರದೇಶದ ನಿವಾಸಿ ಮಹ್ಮದ್ ನಾಸೀರ್ (33) ರೈಲು ಡಿಕ್ಕಿಯಾಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತ ಮಹ್ಮದ್ ನಾಸೀರ್ ಅವರು ಕಳೆದ ಸುಮಾರು 15 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ 3–4 ವರ್ಷಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿಕೊಂಡು ಹೊರಗೆ ಹೋದವರು, ಕೊಂಕಣ ರೈಲ್ವೆ ಟನಲ್ ಸಮೀಪ ಹಾದು ಹೋಗುತ್ತಿದ್ದ ರೈಲಿಗೆ ಡಿಕ್ಕಿಯಾಗಿದ್ದಾರೆ.
ಅಪಘಾತದಲ್ಲಿ ತಲೆ, ಎಡ ಕಣ್ಣು ಹಾಗೂ ಕೈ–ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮೃತನ ಅಣ್ಣ ನಚೀಲ್ ಶೇಖ್ ಅವರು ಭಟ್ಕಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


More Stories
ಪ್ರತಿಷ್ಠಿತ ‘ಡಿಜಿ-ಐಜಿಪಿ ಶ್ಲಾಘನಾ ಪದಕ’ ಗೌರವಕ್ಕೆ ಭಾಜನರಾದ ಭಟ್ಕಳದ ಹೆಡ್ ಕಾನ್ಸ್ಟೇಬಲ್ ದೀಪಕ್ ನಾಯ್ಕ
ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸಿಗೆ ಇಲಾಖೆಗಳ ಸಮನ್ವಯ ಅಗತ್ಯ: ಪ್ರಭಾರಿ ತಹಶೀಲ್ದಾರ್ ಪ್ರವೀಣ್ ಕಾರಂಡೆ
ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಪ್ರಜ್ವಲ್ ಗೋಳಿ ಮತ್ತು ಪ್ರಸಾದ ಶೆಟ್ಟಿ ಸಾಧನೆ