ಬಾಳೆಗಿಡ ಕಡಿಯುವ ಕೆಲಸವೇ ಪ್ರಾಣಾಪಾಯಕ್ಕೆ ಕಾರಣ!

ಭಟ್ಕಳ: ಭಟ್ಕಳ ತಾಲ್ಲೂಕಿನ ಬೈಲೂರಿನಲ್ಲಿ ಕೇಳಗಿನ ಸೇರುಗಾರ ಕೇರಿಯ ಸತೀಶ (೪೬) ಎಂಬ ಕೃಷಿಕನಿಗೆ ಬಾಳೆಗಿಡ ಕಡಿಯುವ ಕೆಲಸವೇ ಜೀವ ಕಿತ್ತುಕೊಂಡ ದಾರುಣ ಘಟನೆ ನಡೆದಿದೆ.
ಮನೆಯ ಹತ್ತಿರದ ಬಾವಿ ಕಟ್ಟೆಯ ಮೇಲೆ ನಿಂತು ಬಾಳೆಗಿಡದ ಗೋಣೆಯನ್ನು ಕಡಿಯುತ್ತಿದ್ದಾಗ ಕಾಲು ಜಾರಿ ನೇರವಾಗಿ ಬಾವಿಗೆ ಬಿದ್ದ ಅವರು, ನೀರು ಕುಡಿದು ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ಮೃತನ ತಮ್ಮ ಉಲ್ಲಾಸ ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ