March 2, 2026

ಶಿಕ್ಷಣ ತಜ್ಞ ಎಸ್.ಜೆ.ಕೈರನ್ ರಿಗೆ ಸನ್ಮಾನ.

ಹೊನ್ನಾವರ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ರಜತ ಮಹೋತ್ಸವದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದ ಶಿಕ್ಷಣ ತಜ್ಞ ಎಸ್.ಜೆ.ಕೈರನ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.

ಕಸಾಪ ಜಿಲ್ಲಾ ಅಧ್ಯಕ್ಷ ಬಿ.ಎನ್.ವಾಸರೆ, ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ಕೋಶಾಧ್ಯಕ್ಷ ಮುರ್ತುಜಾ ಹುಸೇನ್, ತಾಲೂಕು ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ ಇದ್ದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

About The Author

error: Content is protected !!