ಭಟ್ಕಳ :ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಧಾರವಾಡ ಬೆಳಗಾವಿ ವಿಭಾಗ ಮಟ್ಟದ ಪ್ರೌಢ ಶಾಲಾ ಮಕ್ಕಳ ಹಾಗೂ ಚಿತ್ರಕಲಾ ಶಿಕ್ಷಕರ ಚಿತ್ರಕಲಾ ಸ್ಪರ್ಧೆ 2025-26 ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಚಿತ್ರಕಲಾ ಶಿಕ್ಷಕರಿಗೆ ವಿಭಾಗ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ದಿನಾಂಕ – 24-01-2026 ರಂದು ಪ್ರಾರ್ಥನಾ ಮಂದಿರ ಡಯಟ್ ಧಾರವಾಡದಲ್ಲಿ ಏರ್ಪಡಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಭಟ್ಕಳ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೈಲೂರು ಈ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಕುಮಾರ ರಜತ್ ಆರ್. ನಾಯ್ಕ ಹಾಗೂ ಈ ಶಾಲೆಯ ಚಿತ್ರಕಲಾ ಶಿಕ್ಷಕರಾದ ಶ್ರೀ ಚನ್ನವೀರಪ್ಪ ಆರ್. ಪೂಜಾರಿಯವರು ಈ ಸ್ಪರ್ಧೆಯಲ್ಲಿ ಸ್ಪರ್ಧಿಸಿ ವಿಜೇತರಾಗಿ “ಗುರುಶಿಷ್ಯ” ಇಬ್ಬರೂ ಕೂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಎಸ್.ಡಿ.ಎಮ್.ಸಿ ವತಿಯಿಂದ ಹೃದಯಸ್ಪರ್ಶಿಯಾಗಿ ಅಭಿನಂದಿಸಿರುತ್ತಾರೆ.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ