ಹೊನ್ನಾವರ : ತಾಲೂಕಿನ ಕೆಳಗಿನ ಮೂಡ್ಕಣಿ ಗ್ರಾಮದ ನಿವಾಸಿಯಾದ ಬಸ್ಟ್ಯಾಂವ್ ಡಯಾಸ್ ದಂಪತಿಗಳ ಪುತ್ರಿ ಕು.ಮಾಪ್ರೇಡ್ ಡಯಾಸ್ ಇವರು ಸಿವಿಲ್ ನ್ಯಾಯಾದೀಶರಾಗಿ ನೇಮಕಗೊಂಡಿದ್ದಾರೆ.
ತೀರಾ ಬಡತನದಲ್ಲಿ ಬೆಳೆದ ಮಾಪ್ರೇಡ್ ಡಯಾಸ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕಿರಿಯ ಪ್ರಾಥಮಿಕ ಶಾಲೆ ಕೆಳಗಿನ ಮೂಡ್ಕಣಿಯಲ್ಲಿ ಮುಗಿಸಿ,ನಂತರ ಪ್ರೌಢ ಶಿಕ್ಷಣವನ್ನು ಜಳವಳ್ಳಿ ಪ್ರೌಢ ಶಾಲೆಯಲ್ಲಿ ಪಡೆದು ,ಪದವಿ ಶಿಕ್ಷಣವನ್ನು ಹೊನ್ನಾವರ ಎಸ್. ಡಿ. ಎಮ್. ಕಾಲೇಜಿನಲ್ಲಿ ಮುಗಿಸಿದ ನಂತರ ಕಾನೂನು ಶಿಕ್ಷಣವನ್ನು ಉಡುಪಿಯಲ್ಲಿ ಪಡೆದರು. ಇತ್ತೀಚೆಗೆ ನಡೆದ ಸಿವಿಲ್ ನ್ಯಾಯಾದೀಶರ ನೇಮಕಾತಿ ಪರೀಕ್ಷೆಯಲ್ಲಿ ಮೊದಲ ಹಂತದಲ್ಲಿಯೇ ತೇರ್ಗಡೆಗೊಂಡು ಸಿವಿಲ್ ನ್ಯಾಯಾದೀಶರಾಗಿ ನೇಮಕಗೊಂಡಿದ್ದಾರೆ.
ಈ ಕುರಿತಂತೆ ಹರ್ಷ ವ್ಯಕ್ತಪಡಿಸಿರುವ ಊರ ನಾಗರೀಕರು ಮತ್ತು ಸಂಬಂಧಿಗಳು ನ್ಯಾಯಾಧೀಶರಾಗಿ ನೇಮಕಗೊಂಡಿರುವ ಮಾಪ್ರೆಢ ಅವರನ್ನು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.
ಮಾಪ್ರೆಡ್ ಡಯಾಸ ಅವರು ಕಳೆದ ಡಿಸೆಂಬರ್ ತಿಂಗಳಲ್ಲಿ ಹೊನ್ನಾವರ ಪಟ್ಟಣದ ಗಾಂಧಿ ನಗರದ ನಿವಾಸಿ, ಇಗ್ನೇಷಿಯಸ್ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ ಬಸ್ ಚಾಲಕರಾಗಿರುವ ಜೋಸೆಫ್ ಪರ್ನಾಂಡಿಸ್ ದಂಪತಿಗಳ ಪುತ್ರನನ್ನು ವಿವಾಹವಾಗಿ ಈಗ ಹೊನ್ನಾವರ ನಿವಾಸಿಯಾಗಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಬರೋಬ್ಬರಿ ₹17 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ಇಬ್ಬರು ಖದೀಮರನ್ನು ಹೆಡೆಮುರಿ ಕಟ್ಟಿದ ಪೊಲೀಸರು
ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ರೂ. 14 ಲಕ್ಷ ವೆಚ್ಚದ ಸಿಎಸ್ಆರ್ ಶೌಚಾಲಯ ಉದ್ಘಾಟನೆ
ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವರ್ಷದ ಅತ್ಯುತ್ತಮ ICSE ಶಾಲಾ ಪ್ರಶಸ್ತಿಯನ್ನು ಪಡೆದಿರುತ್ತದೆ.