

ಕೃಷ್ಣರಾಜಪೇಟೆ : ಪಟ್ಟಣ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾಗಿ ವರ್ಗಾವಣೆಗೊಂಡು ಆಗಮಿಸಿರುವ, ದಕ್ಷ ಪೊಲೀಸ್ ಅಧಿಕಾರಿ ಸುನಿಲ್ ಕುಮಾರ್ ಅವರನ್ನು ಕೆ.ಆರ್.ಪೇಟೆ ಪಟ್ಟಣದ ಡಾಬಾ ಹೋಟೆಲ್ ಗಳ ಮಾಲೀಕರು ಸರಳ ಸಮಾರಂಭದಲ್ಲಿ ಅಭಿನಂದಿಸಿ ಸನ್ಮಾನಿಸಿ ಗೌರವಿಸಿದರು. ಕೃಷ್ಣರಾಜಪೇಟೆ ಪಟ್ಟಣದ ಡಾಬಾ ಹೋಟೆಲ್ ಗಳ ಮಾಲೀಕರಾದ ಕೋಮನಹಳ್ಳಿ ಮಂಜುನಾಥ, ಹೆಮ್ಮನಹಳ್ಳಿ ಕುಮಾರ್, ಸಾಧುಗೋನಹಳ್ಳಿ ನಟೇಶ್ ಕುಮಾರ್, ಕೆ.ಆರ್. ಪೇಟೆ ಕಬಾಬ್ ರಘು ಸೇರಿದಂತೆ ವಿವಿಧ ಡಾಬಾಗಳ ಮಾಲೀಕರು ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು.

ಕೆ.ಆರ್.ಪೇಟೆ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಬಾ ಮತ್ತು ಹೋಟೆಲ್ ಗಳ ಮಾಲೀಕರು ಕಾನೂನು ಸುವ್ಯವಸ್ಥೆಯನ್ನು ಕಡ್ಡಾಯವಾಗಿ ಪಾಲಿಸಬೇಕು, ರಾತ್ರಿ 11:00ಯ ವೇಳೆಗೆ ಕಡ್ಡಾಯವಾಗಿ ಡಾಬಾ ಗಳನ್ನು ಬಂದ್ ಮಾಡಬೇಕು. ಅಪರಿಚಿತ ಅನುಮಾನಾಸ್ಪದ ವ್ಯಕ್ತಿಗಳು ಡಾಬಾದಲ್ಲಿ ಕಂಡು ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ನಾಗರಿಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಸುನಿಲ್ ಕುಮಾರ್ ಮನವಿ ಮಾಡಿದರು. ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

About The Author




More Stories
ಕಿಕ್ಕೇರಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 74 ಲಕ್ಷ ರೂ. ಲಾಭ: ಅಧ್ಯಕ್ಷ ಕೆ.ವೈ. ಹರೀಶ್ ಮಾಹಿತಿ.
ಮಂದಗೆರೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಪುಟಾಣಿ ಮಕ್ಕಳಿಗೆ ನಟ ಮಧು ಮಂದಗೆರೆಯಿಂದ ಸಿಹಿ ವಿತರಣೆ.
ಸಿದ್ದರಾಮಯ್ಯ ಶೋಷಿತ ವರ್ಗಗಳ ಉಸಿರು, ಸಾಮಾಜಿಕ ನ್ಯಾಯದ ಹರಿಕಾರ: ಕೆ.ಆರ್.ಪೇಟೆಯಲ್ಲಿ ಬಿ. ನಾಗೇಂದ್ರಕುಮಾರ್ ಬಣ್ಣನೆ