

ಭಟ್ಕಳ: ಹೋಳಿ ಹಬ್ಬದ ಅಂಗವಾಗಿ ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಗುರುವಾರ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ಗುಲಾಲ್ ಹಚ್ಚಿಕೊಂಡು ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಕಚೇರಿ ಕಾರ್ಯಗಳ ಮಧ್ಯೆಯೇ ಸಿಬ್ಬಂದಿ ಒಬ್ಬರಿಗೊಬ್ಬರು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಿಹಿ ಹಂಚಿಕೊಂಡರು. ಕಚೇರಿ ಆವರಣದಲ್ಲಿ ಕೆಲಕಾಲ ಹಬ್ಬದ ಸಂಭ್ರಮ ಮೂಡಿದ್ದು, ಪರಸ್ಪರ ಬಣ್ಣ ಹಚ್ಚಿಕೊಂಡು ಸ್ನೇಹಭಾವ ವ್ಯಕ್ತಪಡಿಸಿದರು. ಬಳಿಕ ಎಲ್ಲರು ಸಮೂಹವಾಗಿ ಫೋಟೋ ತೆಗೆದುಕೊಂಡು ಸಂಭ್ರಮ ಹಂಚಿಕೊಂಡರು.

ಹಬ್ಬದ ಹಿನ್ನೆಲೆಯಲ್ಲಿ ಕಚೇರಿಗಳಲ್ಲಿ ಸಹೋದರತ್ವ ಮತ್ತು ಸ್ನೇಹಭಾವ ಹೆಚ್ಚಾಗಲಿ ಎಂದು ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಸಿಬ್ಬಂದಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಉಪತಹಶೀಲ್ದಾರರು, ಶಿರಸ್ತೇದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು, ಕಚೇರಿ ಸಿಬ್ಬಂದಿ ಹಾಗೂ ಗ್ರಾಮ ಸಹಾಯಕರು ಉಪಸ್ಥಿತರಿದ್ದರು

About The Author




More Stories
ಭಟ್ಕಳದಲ್ಲಿ ಅದ್ದೂರಿ ಮೀಲಾದ್ ಮೆರವಣಿಗೆ
ಶ್ರೀ ಗುರು ಸುಧೀಂದ್ರ ಕಾಲೇಜಿನ ರೋಟರಾಕ್ಟ್ ಕ್ಲಬ್ನ ನೂತನ ಪದಾಧಿಕಾರಿಗಳ ಪದಗ್ರಹಣ – ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಜೈವಿಠಲ್ ಕುಬಾಲ್ ಕರೆ*
ಅಡಿಕೆ ಕೊಯ್ಯುವಾಗ ಆಕಸ್ಮಿಕ ವಿದ್ಯುತ್ ಸ್ಪರ್ಶ: 11 ಕೆ.ವಿ. ತಂತಿಗೆ ಏಣಿ ತಾಗಿ ಕೃಷಿಕ ದಾರುಣ ಸಾವು!