ಭಟ್ಕಳ: ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿತರಾಗಿ ಬಂದರ್ ರೋಡ್ 3ನೇ ಕ್ರಾಸ್ನ ನಿವಾಸಿ ಸರ್ವೋಶ ಹುಸೇನ್ (37) ಹಾಗೂ ಬೆಂಗಳೂರಿನ ಶಣ್ಮುಖ ಕೆ.ಎಸ್. ಗುರುತಿಸಲಾಗಿದೆ.
ಇವರು ಸಕ್ಷಮ ಪ್ರಾಧಿಕಾರದಿಂದ ಜಾನುವಾರು ಸಾಗಾಟಕ್ಕೆ ಅಗತ್ಯ ಪರವಾನಿಗೆ ಪಡೆಯದೆ, ವಾಹನದಲ್ಲಿ ಸುಮಾರು ₹6 ಲಕ್ಷ ಮೌಲ್ಯದ ಎರಡು ಕೋಣಗಳನ್ನು ಕೇರಳ ರಾಜ್ಯದ
ಮಲ್ಲಪುರಂನಿಂದ ಭಟ್ಕಳಕ್ಕೆ ಸಾಗಾಟ ಮಾಡಿಕೊಂಡು ಬಂದು ಕಟ್ಟಿ ಹಾಕಿರುವುದು ತಿಳಿದುಬಂದಿದೆ.

ಈ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ವೆಂಕಟೇಶ ಮುರನಾಳ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಈ ಕುರಿತು ಗ್ರಾಮೀಣ ಠಾಣೆಯ ಪಿಎಸ್ಐ ಮಲ್ಲಿಕಾರ್ಜುನ ಕೊರಾಣಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ