March 31, 2026

ಅಕ್ರಮವಾಗಿ ಜಾನುವಾರು ಸಾಗಾಟ; ಇಬ್ಬರ ವಿರುದ್ಧ ಪ್ರಕರಣ

ಭಟ್ಕಳ: ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿತರಾಗಿ ಬಂದರ್ ರೋಡ್ 3ನೇ ಕ್ರಾಸ್‌ನ ನಿವಾಸಿ ಸರ್ವೋಶ ಹುಸೇನ್ (37) ಹಾಗೂ ಬೆಂಗಳೂರಿನ ಶಣ್ಮುಖ ಕೆ.ಎಸ್. ಗುರುತಿಸಲಾಗಿದೆ.
ಇವರು ಸಕ್ಷಮ ಪ್ರಾಧಿಕಾರದಿಂದ ಜಾನುವಾರು ಸಾಗಾಟಕ್ಕೆ ಅಗತ್ಯ ಪರವಾನಿಗೆ ಪಡೆಯದೆ, ವಾಹನದಲ್ಲಿ ಸುಮಾರು ₹6 ಲಕ್ಷ ಮೌಲ್ಯದ ಎರಡು ಕೋಣಗಳನ್ನು ಕೇರಳ ರಾಜ್ಯದ
ಮಲ್ಲಪುರಂನಿಂದ ಭಟ್ಕಳಕ್ಕೆ ಸಾಗಾಟ ಮಾಡಿಕೊಂಡು ಬಂದು ಕಟ್ಟಿ ಹಾಕಿರುವುದು ತಿಳಿದುಬಂದಿದೆ.


ಈ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ವೆಂಕಟೇಶ ಮುರನಾಳ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಈ ಕುರಿತು ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಕೊರಾಣಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author

error: Content is protected !!