ಭಟ್ಕಳ: ಹೃದಯಾಘಾತದಿಂದ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಭಟ್ಕಳ ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಕುಕುನಿರ್ ನಿವಾಸಿ ಮಂಜುನಾಥ ಜಟ್ಟ ನಾಯ್ಕ (54) ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಮಂಜುನಾಥ ಜಟ್ಟ ನಾಯ್ಕ ಅವರು ಮನೆಯಿಂದ ಕೂಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದರು. ಬಳಿಕ ಭಟ್ಕಳ ನಗರದ ಭಾರತ ಪೆಟ್ರೋಲ್ ಬಂಕ್ ಪಕ್ಕದ ದಿಲ್ಮನ್ ಮನೆ ಸಮೀಪದ ಖಾಲಿ ಜಾಗದಲ್ಲಿ ಅವರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಹೃದಯಾಘಾತ ಅಥವಾ ಅಸ್ವಸ್ಥತೆಯಿಂದ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಮೃತನ ಸಂಬಂಧಿ ಕೃಷ್ಣ ಸೋಮಯ್ಯ ನಾಯ್ಕ ಅವರು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

More Stories
ಮಹಿಳಾ ಶಕ್ತಿ ಅರಳಿದ ಸಂಭ್ರಮ
ವಸಿಮ್ ಅಹ್ಮದ್ ಹಲ್ವೆಗರ್ ಅವರಿಗೆ ಪಿಎಚ್ಡಿ ಪದವಿ
ಜನ ಮೆಚ್ಚುಗೆ ಪಡೆದ “ಮಕ್ಕಳ ಸಂತೆ ಮತ್ತು ವಿಜ್ಞಾನ ವಸ್ತು ಪ್ರದರ್ಶನ”