ಭಟ್ಕಳ: ಮೀನುಗಾರಿಕೆಗೆ ತೆರಳಿದ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಅಳೇಕೋಡಿ ಬಂದರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಒಡಿಶಾ ರಾಜ್ಯದ ಸುಂದರಗಢ ಜಿಲ್ಲೆಯ 27 ವರ್ಷದ ಜೈರಾಮ್ ಬಿರಗಂಟಿ ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಜನಾಬಾಯಿ ಅವರಿಗೆ ಸೇರಿದ ‘ಶ್ರೀ ಮುಖಾಂಬಿಕಾ’ ಬೋಟ್ ಹತ್ತುವ ವೇಳೆ ಕಾಲು ಜಾರಿ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಸ್ಥಳೀಯರು ತಕ್ಷಣ ಶೋಧ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿಲ್ಲ. ಈ ಸಂಬಂಧ ದುಲವ ತಂದೆ ಗೋವರ್ಧನ ಆಡಾ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ