ಭಟ್ಕಳ: ಮೀನುಗಾರಿಕೆಗೆ ತೆರಳಿದ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಅಳೇಕೋಡಿ ಬಂದರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಒಡಿಶಾ ರಾಜ್ಯದ ಸುಂದರಗಢ ಜಿಲ್ಲೆಯ 27 ವರ್ಷದ ಜೈರಾಮ್ ಬಿರಗಂಟಿ ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಜನಾಬಾಯಿ ಅವರಿಗೆ ಸೇರಿದ ‘ಶ್ರೀ ಮುಖಾಂಬಿಕಾ’ ಬೋಟ್ ಹತ್ತುವ ವೇಳೆ ಕಾಲು ಜಾರಿ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಸ್ಥಳೀಯರು ತಕ್ಷಣ ಶೋಧ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿಲ್ಲ. ಈ ಸಂಬಂಧ ದುಲವ ತಂದೆ ಗೋವರ್ಧನ ಆಡಾ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ