ಭಟ್ಕಳ: ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಘಟನೆ ನಡೆದಿದೆ.
ತಾಲೂಕಿನ ಹೆಬಳೆ ಜಾಮೀಯಾಬಾದ ಹಾಗೂ ವೆಂಕಟಾಪುರದ ಜಾಗಟೆಬೈಲ್ ಮೈದಾನದ ಸಮೀಪ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಆಸಿಫ್ ಕೆ.ಎ. (26) ಹೆಬಳೆ ಜಾಮೀಯಾಬಾದ ನಿವಾಸಿ, ಬಿಲಾಲ್ ಅಹ್ಮದ್ (36) ಮದೀನಾ ಕಾಲೋನಿಯ ಉಮ್ಮರ್ ಸ್ಟ್ರೀಟ್ ನಿವಾಸಿ ಹಾಗೂ ಮಹಮ್ಮದ್ ರಸೂಲ್ (34) ಜಾಲಿ ತಗ್ಗರಗೋಡು ನಿವಾಸಿಗಳಾಗಿದ್ದಾರೆ.
ಸಂಶಯಾಸ್ಪದವಾಗಿ ವರ್ತಿಸುತ್ತಿದ್ದ ಇವರನ್ನು ಪೊಲೀಸರು ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಪತ್ತೆಯಾಗಿದೆ. ಬಳಿಕ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿಯೂ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಿಕಾರ್ಜುನ ಕೊರಾಣಿ ಹಾಗೂ ಪಿಎಸ್ಐ ಭರಮಪ್ಪ ಬೆಳಗಲಿ ಸರ್ಕಾರದ ಪರವಾಗಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ