ಭಟ್ಕಳ: ತಾಲೂಕಿನ ಮಾವಿನಕುರ್ವೆ ಬಂದರಿನಲ್ಲಿ ಬೋಟ್ ಕ್ಯಾಬಿನ್ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಬಂದಿದೆ. ಮೃತರನ್ನು ಛತ್ತೀಸ್ಗಢ ಮೂಲದ ಬುಧನ ಸಾಯ್ ತಂದೆ ಜನೇಶ್ವರ ಸಾಯ್ (39) ಎಂದು ಗುರುತಿಸಲಾಗಿದೆ.ಇವರು ಮದ್ಯಪಾನದ ಚಟ ಹೊಂದಿದ್ದರು ಎಂದು ತಿಳಿದುಬಂದಿದೆ.
ಬೋಟ್ ಕ್ಯಾಬಿನ್ನಲ್ಲಿ ಮಲಗಿದ್ದ ಇವರನ್ನು ಬೆಳಿಗ್ಗೆ ಎಬ್ಬಿಸಲು ಹೋದಾಗ ಪ್ರತಿಕ್ರಿಯಿಸದೇ ಇರುವುದರಿಂದ ತಕ್ಷಣ ಭಟ್ಕಳ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರಿಶೀಲಿಸಿದ ವೈದ್ಯರು ಈತ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ.
ಈ ಕುರಿತು ಮೃತನ ಸಹೋದರ ಗೌತಮ ಪೈಂಕರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


More Stories
ಎಐಟಿಎಂನಲ್ಲಿ ವಿಟಿಯು ಅಂತರ ಕಾಲೇಜು ಫುಟ್ಬಾಲ್ ಪಂದ್ಯಾವಳಿ ಚಾಲನೆ
ತೇಜಸ್ವಿ ನಾಯ್ಕರಿಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ
ಬೈಲೂರಿನಲ್ಲಿ ಭಗವದ್ಗೀತೆಯ 3ನೇ ಅಧ್ಯಾಯ ಸಮರ್ಪಣೆ, ಮಾತೃವಂದನೆ ಕಾರ್ಯಕ್ರಮ ಯಶಸ್ವಿ