ಭಟ್ಕಳ: ತಾಲೂಕಿನ ಮಾವಿನಕುರ್ವೆ ಬಂದರಿನಲ್ಲಿ ಬೋಟ್ ಕ್ಯಾಬಿನ್ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ ಬಂದಿದೆ. ಮೃತರನ್ನು ಛತ್ತೀಸ್ಗಢ ಮೂಲದ ಬುಧನ ಸಾಯ್ ತಂದೆ ಜನೇಶ್ವರ ಸಾಯ್ (39) ಎಂದು ಗುರುತಿಸಲಾಗಿದೆ.ಇವರು ಮದ್ಯಪಾನದ ಚಟ ಹೊಂದಿದ್ದರು ಎಂದು ತಿಳಿದುಬಂದಿದೆ.

ಬೋಟ್ ಕ್ಯಾಬಿನ್ನಲ್ಲಿ ಮಲಗಿದ್ದ ಇವರನ್ನು ಬೆಳಿಗ್ಗೆ ಎಬ್ಬಿಸಲು ಹೋದಾಗ ಪ್ರತಿಕ್ರಿಯಿಸದೇ ಇರುವುದರಿಂದ ತಕ್ಷಣ ಭಟ್ಕಳ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರಿಶೀಲಿಸಿದ ವೈದ್ಯರು ಈತ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ.
ಈ ಕುರಿತು ಮೃತನ ಸಹೋದರ ಗೌತಮ ಪೈಂಕರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.



More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ