ಭಟ್ಕಳ: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಆರೋಪಿತರಿಗೆ ಜಾಮೀನು ದೊರಕಿಸುವ ಮೂಲಕ ವಂಚನೆ ನಡೆಸುತ್ತಿದ್ದ ಆರೋಪಿತನನ್ನು ಭಟ್ಕಳ ಶಹರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಹೇಶ ತಂದೆ ಬಿ ಮೋಹನ ನಾಯಕ, ಪ್ರಾಯ: 42 ವರ್ಷ, ಮರೋಳಿ, ಮಂಗಳೂರು, ಎಂದು ಗುರುತಿಸಲಾಗಿದೆ.
2025 ಜೂನ್ 30ರಂದು ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿ ಚೇತನ ಎಂ. ಚಂದಾವರ್ಕರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಜಾಮೀನು ಪ್ರಮಾಣ ಪತ್ರಕ್ಕೆ ಲಗತ್ತಿಸಿದ್ದ ಆಧಾರ್ ಕಾರ್ಡ್ಗಳನ್ನು ಜಾಮೀನು ನಿರ್ವಹಣಾ ವ್ಯವಸ್ಥೆ ಮೂಲಕ ಪರಿಶೀಲಿಸಿದಾಗ ಅವು ನಕಲಿ ಎಂಬುದು ಪತ್ತೆಯಾಗಿದೆ. ಈ ವೇಳೆ ಆರೋಪಿತರು ನ್ಯಾಯಾಲಯದಿಂದ ಪರಾರಿಯಾಗಿದ್ದರು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು 2026 ಏಪ್ರಿಲ್ 15ರಂದು ಮಂಗಳೂರಿನಲ್ಲಿ ಆರೋಪಿತನನ್ನು ಬಂಧಿಸಿದ್ದಾರೆ. ವಿಚಾರಣೆಯಲ್ಲಿ ಇನ್ನಿಬ್ಬರು ಆರೋಪಿತರ ಭಾಗವಹಿಸಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಅವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಎಸ್ಪಿ ದೀಪನ್ ಎಂ.ಎನ್., ಹೆಚ್ಚುವರಿ ಎಸ್ಪಿಗಳಾದ ಎಂ. ಕೃಷ್ಣಮೂರ್ತಿ, ಜಗದೀಶ್ ಎಂ., ಡಿವೈಎಸ್ಪಿ ಗಿರೀಶ್ ಬಿ. ಮಾರ್ಗದರ್ಶನದಲ್ಲಿ ಪಿಐ ದಿವಾಕರ ಪಿ.ಎಂ. ನೇತೃತ್ವದಲ್ಲಿ ಪಿ.ಎಸ್.ಐ ನವೀನ್ ಎಸ್ ನಾಯ್ಕ ಮತ್ತು ಸಿಬ್ಬಂದಿಯವರಾದ ದಿನೇಶ ನಾಯಕ, ಮಹಾಂತೇಶ ಹಿರೇಮಠ, ಕಾರ್ಯಾಚರಣೆ ನಡೆಸಿದರು. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

More Stories
ಭಟ್ಕಳ ಕೋಣಾರದಲ್ಲಿ ಚಿರತೆ ಓಡಾಟ:
ಮುರ್ಡೇಶ್ವರದಲ್ಲಿ ಶ್ರೀ ರಾಮಚಂದ್ರಾಪುರ ಮಠದ ಸ್ವರ್ಣ ಪಾದುಕಾ ಸಂಚಾರ
19 ಕೋಟಿ ರೂ. ಖಾರ್ಲಾಂಡ್ ಕಾಮಗಾರಿ ಉದ್ಘಾಟನೆ – ಸಚಿವ ಮಂಕಾಳ ವೈದ್ಯ