ಹೊನ್ನಾವರ: ಪಟ್ಟಣದ ಬಸ್ಸ್ಟ್ಯಾಂಡ್ ರಸ್ತೆಯಲ್ಲಿರುವ ಎ.ಆರ್.ಎಮ್ ಸೂಪರ್ ಮಾರ್ಕೆಟ್ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಹೊನ್ನಾವರ ಪೊಲೀಸರು ಕೇವಲ 48 ಗಂಟೆಗಳಲ್ಲೇ ಬಗೆಹರಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಏಪ್ರಿಲ್ 16ರಂದು ಪ್ರಕರಣ ದಾಖಲಾಗುತ್ತಿದ್ದಂತೆಯೇ ಪೊಲೀಸರು ತೀವ್ರ ತನಿಖೆ ಕೈಗೊಂಡರು. ಉತ್ತರಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಭಟ್ಕಳ ಉಪವಿಭಾಗದ ಡಿವೈಎಸ್ಪಿ ಗಿರೀಶ್ ಬಿ., ಸಿಪಿಐ ಸಿದ್ದರಾಮೇಶ್ವರ ಎಸ್. ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಯಿತು.
ಪಿ.ಎಸ್.ಐ ಮಹಾಂತೇಶ ವಾಲ್ಮೀಕಿ ಹಾಗೂ ಮಂಜುನಾಥ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ, ಜಿಲ್ಲಾ ಬೆರಳಚ್ಚು ವಿಭಾಗದ ಸಹಕಾರದೊಂದಿಗೆ ಆರೋಪಿಯ ಸುಳಿವು ಪತ್ತೆಹಚ್ಚಿತು.
ಕುಮಟಾದ ಸಿತಾರಾ ಹೋಟೆಲ್ ಎದುರು ಮುಜಾಫರ್ ಶೇಖ್ (27), ದಾಂಡೇಲಿ ಸುಭಾಷನಗರ ನಿವಾಸಿ, ಈತನನ್ನು ಬಂಧಿಸಿ, ಕಳುವಾದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವೇಗವಾಗಿ ಪ್ರಕರಣ ಭೇದಿಸಿರುವ ಪೊಲೀಸರ ಕಾರ್ಯಕ್ಷಮತೆಯನ್ನು ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ