ಭಟ್ಕಳ: ಎರಡು ರಾಯಲ್ ಎನ್ಫೀಲ್ಡ್ ಮೋಟಾರ್ ಬೈಕ್ಗಳು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮವಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಂಸುದ್ದೀನ್ ಸರ್ಕಲ್ ಸಮೀಪ ನಡೆದಿದೆ.

ಗಾಯಗೊಂಡವರನ್ನು ಕೇರಳದ ಎರ್ನಾಕುಲಂ ನಿವಾಸಿ ಮನೋಜ್ ಸೈಬಿಯಾ (50) ಹಾಗೂ ಮಂಗಳೂರು ಸುರತ್ಕಲ್ನ ಜಲೀಲ್ (40) ಎಂದು ಗುರುತಿಸಲಾಗಿದೆ. ಮನೋಜ್ ಅವರ ಬಲಗಾಲು ಹಾಗೂ ಮುಖ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಮ್ಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರು ಗೋವಾದಿಂದ ಎರ್ನಾಕುಲಂ ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಇನ್ನೊಂದು ಬೈಕ್ನ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಈತನ ಮೇಲೆ ಅಪರಾಧ ಪ್ರಕರಣವೊಂದರ ಆರೋಪವಿದ್ದು, ಭಟ್ಕಳ ನ್ಯಾಯಾಲಯಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ