
ಭಟ್ಕಳ: ಭಟ್ಕಳದ ಅಳ್ವೆಕೋಡಿ ಬಂದರಿಯಿAದ ಬುಧವಾರ ಮಧ್ಯಾಹ್ನ ಮೀನುಗಾರಿಕೆಗೆ ತೆರಳಿದ್ದ ಮಹಾಸತಿ ಎಂಬ ಗಿಲ್ನಟ್ ದೋಣಿ ಸಮುದ್ರದ ಅಲೆಗೆ ಸಿಲುಕಿ ಮುಳುಗಿದ ದುರ್ಘಟನೆ ನಡೆದಿದೆ. ಘಟನೆಯ ವೇಳೆ ದೋಣಿಯಲ್ಲಿ ಇದ್ದ ನಾಲ್ವರು ಮೀನುಗಾರರಲ್ಲಿ ಒಬ್ಬರಾದ ರಾಮಕೃಷ್ಣ ಮಂಜು ಮೊಗೇರ ಅವರ ಶವವನ್ನು ಹೊನ್ನೆಗ್ಗದೆಯ ಸಮುದ್ರ ತೀರದಲ್ಲಿ ಪತ್ತೆಹಚ್ಚಲಾಗಿದೆ.

ಇನ್ನುಳಿದ ಮೂವರು ಸತೀಶ್ ಮೊಗೇರ, ಗಣೇಶ್ ಮೊಗೇರ ಹಾಗೂ ನಿಶ್ಚಿತ ಮೊಗೇರ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಜೋರಾಗಿದೆ. ಈ ಕಾರ್ಯದಲ್ಲಿ ಸ್ಥಳೀಯ ಮೀನುಗಾರರು ಹಾಗೂ ಕರಾವಳಿ ಭದ್ರತಾ ಪಡೆ ತೊಡಗಿದ್ದಾರೆ.
ಈ ದುರ್ಘಟನೆ ಭಟ್ಕಳದ ಮೀನುಗಾರ ಸಮುದಾಯದಲ್ಲಿ ತೀವ್ರ ಬೇಸರ ಮತ್ತು ಆತಂಕವನ್ನು0ಟುಮಾಡಿದೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ