

ಭಟ್ಕಳ: ಪಟ್ಟಣದ ಕಿದ್ವಾಯಿ ರಸ್ತೆಯಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಸುಮಾರು ರೂ 5.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ದುಷ್ಕರ್ಮಿಗಳು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.


ಈ ಕುರಿತು ಶ್ರೀಮತಿ ನಾಹಿದ್ ಅಕ್ತರ್ (49) ಅವರು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರು ಕಿದ್ವಾಯಿ ರಸ್ತೆಯ 1ನೇ ಕ್ರಾಸ್ನಲ್ಲಿ ವಾಸವಾಗಿದ್ದಾರೆ. ದೂರಿನ ಪ್ರಕಾರ, ಮೇ 8ರ ಮುಂಜಾನೆ ಸುಮಾರು 12.50ರ ವೇಳೆಗೆ ಕಳ್ಳರು ಮನೆಯ ಹಿಂಭಾಗದ ಕಿಟಕಿಯ ಗಾಜು ಒಡೆದು ಒಳನುಗ್ಗಿದ್ದಾರೆ. ಬಳಿಕ ಮನೆಯ ಬಾಗಿಲು ತೆರಳಿ ಒಳ ಪ್ರವೇಶಿಸಿ, ಅಲಮಾರಿಯಲ್ಲಿ ಇರಿಸಿದ್ದ ಸುಮಾರು 55 ಗ್ರಾಂ ತೂಕದ ರೂ 5.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ 10 ಸಾವಿರ ನಗದು ಹಣ ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಸಂಬAಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ