ಭಟ್ಕಳ: ಕಪ್ಪೆಚಿಪ್ಪಿನ ದುರಂತದಲ್ಲಿ 11 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಕುಟುಂಬಗಳಿಗೆ ಮಾನವೀಯ ನೆರವು ನೀಡುವ ಉದ್ದೇಶದಿಂದ ಭಟ್ಕಳ ತಾಲೂಕು ಆರ್ಯ ಈಡಿಗ ನಾಮಧಾರಿ ಬಿಲ್ಲವ ನೌಕರಿ ವೃಂದದ ವತಿಯಿಂದ ಸಂಗ್ರಹಿಸಲಾದ ಆರ್ಥಿಕ ಸಹಾಯಧನವನ್ನು ಸಂತ್ರಸ್ತ ಕುಟುಂಬಗಳಿಗೆ ವಿತರಿಸಲಾಯಿತು.
ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಂತ್ರಸ್ತ ಕುಟುಂಬಗಳ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ, ಒಟ್ಟು 9 ಕುಟುಂಬಗಳಿಗೆ ಸಂಗ್ರಹಿಸಲಾದ ನೆರವಿನ ಮೊತ್ತವನ್ನು ಸಮಾನವಾಗಿ ಹಂಚಿಕೆ ಮಾಡಿ ನೀಡಿದರು. ದುಃಖದ ಸಂದರ್ಭದಲ್ಲಿ ಸಮಾಜದ ವತಿಯಿಂದ ನೀಡಲಾದ ಈ ನೆರವು ಕುಟುಂಬಗಳಿಗೆ ಸಾಂತ್ವನ ಹಾಗೂ ಧೈರ್ಯ ತುಂಬುವ ಪ್ರಯತ್ನವಾಗಿದೆ ಎಂದು ಸಂಘಟನೆಯವರು ತಿಳಿಸಿದರು.
ಈ ಸಂದರ್ಭದಲ್ಲಿ ಸಿ.ಆರ್. ನಾಯ್ಕ, ಗೋಪಾಲ ನಾಯ್ಕ, ಮಂಜುನಾಥ ಎನ್. ನಾಯ್ಕ, ದೇವಿದಾಸ ನಾಯ್ಕ, ವಸಂತ ನಾಯ್ಕ, ವೆಂಕಟೇಶ ನಾಯ್ಕ, ರಾಮ ನಾಯ್ಕ ಸೇರಿದಂತೆ ಹಳೆಕೋಟೆ ದೇವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿಗಳು, ಮೊಕ್ತೇಸರರು ಹಾಗೂ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

More Stories
ಶಬರಿಮಲೈನಲ್ಲಿ ಮುರಿನಕಟ್ಟೆ ವಿವಾದ ಶೀಘ್ರ ಪರಿಹಾರಕ್ಕೆ ಅಯ್ಯಪ್ಪ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ
ಗಾಂಜಾ ಸೇವನೆ ದೃಢ; ಮೂವರು ಯುವಕರ ವಿರುದ್ಧ ಪೊಲೀಸ್ ಪ್ರಕರಣ ದಾಖಲು
ಕಾಲೇಜು ಶುಲ್ಕದ ಹಣ ವಾಪಸ್ ಸಿಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ