ಭಟ್ಕಳ: ತಾಲೂಕಿನ ಮುಂಡಳ್ಳಿ ಸಮೀಪದ ಕೆಪ್ಟಿಮನೆ–ಹಾವಳಿಕಂಠದಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಬೆಳಕಿಗೆ ಬಂದಿದೆ.
ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಹರೀಶ ಗೋವಿಂದ ಮೋಗೇರ (35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಮೃತರಾದ ಹರೀಶ ಅವರು ಕಳೆದ ಕೆಲವು ದಿನಗಳಿಂದ ವೈಯಕ್ತಿಕ ಕಾರಣಗಳಿಂದಾಗಿ ಮಾನಸಿಕವಾಗಿ ನೊಂದಿದ್ದರೆನ್ನಲಾಗಿದೆ. ಇದೇ ಬೇಸರದಲ್ಲಿ ಅವರು ತಮ್ಮ ಮನೆಯ ಅಡುಗೆ ಕೋಣೆಯ ಸೀಲಿಂಗ್ ಫ್ಯಾನ್ ಅಳವಡಿಸಲು ಹಾಕಲಾಗಿದ್ದ ಕಬ್ಬಿಣದ ರಾಡಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿ ವಾಸು ನಾಗಪ್ಪ ಮೋಗೇರ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ