ಮುರ್ಡೇಶ್ವರ: ಭಟ್ಕಳ ತಾಲೂಕಾ ಹವ್ಯಕ ಬ್ರಾಹ್ಮಣ ನೌಕರರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಜುಲೈ 26ರಂದು ಮುರ್ಡೇಶ್ವರ ಬಸ್ತಿಮಕ್ಕಿಯ ಶ್ರೀ ರಾಘವೇಶ್ವರ ಭಾರತೀ ಹವ್ಯಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ವಾರ್ಷಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮುರ್ಡೇಶ್ವರದ ಆಚಾರ್ಯ ಭವನದಲ್ಲಿ ಭಟ್ಕಳ ಹವ್ಯಕ ವಲಯದ ಪ್ರಮುಖರಾದ ಬಲ್ಸೆ ಕೃಷ್ಣಾನಂದ ಭಟ್ಟ ಅವರು ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿದ ಬಲ್ಸೆ ಕೃಷ್ಣಾನಂದ ಭಟ್ಟ ಅವರು, “ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಷಯದಲ್ಲಿಯೂ ಸಂಘಟನೆಯ ಅಗತ್ಯತೆ ಹೆಚ್ಚಿದೆ. ಹವ್ಯಕ ನೌಕರರು ತಮ್ಮ ಕ್ಷೇಮಾಭಿವೃದ್ಧಿಗೋಸ್ಕರ ಇಂತಹದ್ದೊಂದು ಸಂಘಟನೆಯನ್ನು ಕಟ್ಟಿಕೊಂಡು, ಅತ್ಯಂತ ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಿರುವುದು ಸಂತಸದ ಸಂಗತಿ. ಸಂಘಟನೆಯ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮ ಬೆಂಬಲ ಸದಾ ಇರಲಿದೆ,” ಎಂದು ಆಶಯ ವ್ಯಕ್ತಪಡಿಸಿದರು.

ಸದಸ್ಯರ ಸಹಕಾರದಿಂದ ಸಂಘಟನೆ ಗಟ್ಟಿಯಾಗಿ ನೆಲೆಯೂರಿದೆ:
ಸಂಘದ ಅಧ್ಯಕ್ಷರಾದ ಮಂಜುನಾಥ ವಿ. ಹೆಗಡೆ ಅವರು ಮಾತನಾಡಿ, “ಹವ್ಯಕ ನೌಕರರ ಕ್ಷೇಮಾಭಿವೃದ್ಧಿಗಾಗಿ ಆರಂಭಗೊಂಡ ಈ ಸಂಘಟನೆ ಇಂದು ಗಟ್ಟಿಯಾಗಿ ನೆಲೆಯೂರಿದೆ. ಸದಸ್ಯರ ನಿರಂತರ ಸಹಕಾರ ಹಾಗೂ ಸಮಾಜದ ಜನರ ಬೆಂಬಲದೊಂದಿಗೆ ಸಂಘ ಮುನ್ನಡೆಯುತ್ತಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಹವ್ಯಕ ಬ್ರಾಹ್ಮಣ ನೌಕರರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಎಲ್ಲರ ಸಹಕಾರ ಅಗತ್ಯವಾಗಿದೆ,” ಎಂದು ಕೋರಿದರು.
ಇದೇ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಶಂಭು ಎನ್. ಹೆಗಡೆ ಅವರು ಮಾತನಾಡಿ, ಹವ್ಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಆರಂಭದ ದಿನಗಳು ಹಾಗೂ ಸಮಾಜಕ್ಕೆ ಈ ಸಂಘಟನೆಯ ಅಗತ್ಯತೆಯ ಕುರಿತು ಸವಿವರವಾಗಿ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಹಿರಿಯರಾದ ಎಂ.ವಿ. ಹೆಗಡೆ, ಜಿ.ವಿ. ಯಾಜಿ, ಗಣೇಶ ಯಾಜಿ, ನಾರಾಯಣ ಪರಂ ಭಟ್ಟ, ಪ್ರಕಾಶ ಭಟ್ಟ, ಕೆ.ಬಿ. ಹೆಗಡೆ, ಶ್ರೀಧರ ಉಡುಪ, ಪಿ.ಎನ್. ಭಟ್ಟ ಹಾಗೂ ಎಂ.ಜಿ. ಹೆಗಡೆ ಉಪಸ್ಥಿತರಿದ್ದರು.


More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ