ಹೊನ್ನಾವರ: ಭಾರತೀಯ ಸಶಸ್ತ್ರ ಪಡೆಗಳ ಶೌರ್ಯ ಮತ್ತು ತ್ಯಾಗದ ಸಂಕೇತವಾದ ‘ಕಾರ್ಗಿಲ್ ವಿಜಯ ದಿವಸ’ದ ಅಂಗವಾಗಿ, ಕಾರ್ಗಿಲ್ ಯುದ್ಧದ ವಿಜಯಗಾಥೆಯನ್ನು ಸ್ಮರಿಸಲು ಹಾಗೂ ಯುವ ಪೀಳಿಗೆಯಲ್ಲಿ ದೇಶಪ್ರೇಮದ ಸಂದೇಶ ಸಾರುವ ಉದ್ದೇಶದಿಂದ ಹೊನ್ನಾವರದಲ್ಲಿ ಬೃಹತ್ ರ್ಯಾಲಿ ಮತ್ತು ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ), ಹೊನ್ನಾವರ ಘಟಕವು ಈ ದೇಶಪ್ರೇಮದ ಕಾರ್ಯಕ್ರಮವನ್ನು ಸಂಘಟಿಸಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಮಂತ್ರಿಸಿದೆ.
ಕಾರ್ಯಕ್ರಮದ ವಿವರಗಳು: ದಿನಾಂಕ: ಜುಲೈ 26, 2026 (ರವಿವಾರ), ಸಮಯ: ಬೆಳಿಗ್ಗೆ 10:00 ಗಂಟೆಗೆ, ರ್ಯಾಲಿ ಮಾರ್ಗ: ಶರಾವತಿ ಸರ್ಕಲ್ನಿಂದ ಪ್ರಾರಂಭ ➔ ರಾಷ್ಟ್ರೀಯ ಹೆದ್ದಾರಿ 66 ➔ ತಹಶೀಲ್ದಾರ್ ಕಚೇರಿ ➔ ಹೊನ್ನಾವರ ಪೊಲೀಸ್ ಠಾಣೆ ➔ ಮಾಸ್ತಿಕಟ್ಟೆ ➔ ಮಾರ್ಕೆಟ್ ಮಾರ್ಗವಾಗಿ ಸಾಗಿ ಪುನಃ ಶರಾವತಿ ಸರ್ಕಲ್ನಲ್ಲಿ ಮುಕ್ತಾಯಗೊಳ್ಳಲಿದೆ.
ರ್ಯಾಲಿ ಹಾಗೂ ಪುಷ್ಪನಮನ:
ವಿವಿಧ ಶಾಲಾ-ಕಾಲೇಜುಗಳ NCC ಕ್ಯಾಡೆಟ್ಗಳು, ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರು ದೇಶಪ್ರೇಮದ ಘೋಷಣೆಗಳೊಂದಿಗೆ ಹೊನ್ನಾವರ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ರ್ಯಾಲಿಯಲ್ಲಿ ಸಾಗಲಿದ್ದಾರೆ.
ರ್ಯಾಲಿಯ ನಂತರ ‘ನ್ಯೂ ಇಂಗ್ಲಿಷ್ ಸ್ಕೂಲ್’ ಸಭಾಂಗಣದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ವೀರ ಯೋಧರಿಗೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ನೆರವೇರಲಿದೆ.

“ದೇಶದ ರಕ್ಷಣೆಗಾಗಿ ಪ್ರಾಣ ಮುಡಿಪಾಗಿಟ್ಟ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕರು, ಯುವಜನರು ಈ ರ್ಯಾಲಿಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಗೌರವಪೂರ್ವಕವಾಗಿ ವಿನಂತಿಸಿದ್ದಾರೆ.
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ